ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ಕಾರಿಗೆ ಬಸ್ಸು ಡಿಕ್ಕಿ – ಇಬ್ಬರಿಗೆ ಗಾಯ…!

 

 

ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.೫ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ನಡೆದಿದೆ.

 

ವಿಟ್ಲದ ಖಾಸಗಿ ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದ ‘ಫಲ್ಗುಣಿ’ ಹೆಸರಿನ ಖಾಸಗಿ ಬಸ್, ನಾಲ್ಕು ರಸ್ತೆಗಳ ಜಂಕ್ಷನ್ ದಾಟಿದ ತಕ್ಷಣವೇ ತನ್ನ ಮುಂಭಾಗದಲ್ಲಿದ್ದ ಹುಂಡೈ ಕಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್ಸಿನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಬಸ್ಸು ಕಾರನ್ನು ಸುಮಾರು 50 ಅಡಿಗಳಷ್ಟು ದೂರಕ್ಕೆ ತಳ್ಳಿಕೊಂಡು ಹೋಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಮತ್ತು ಬಾಲಕ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿತ್ತು.

Leave a Reply

Your email address will not be published. Required fields are marked *

ಬೆಂಗಳೂರಿನಿಂದ  ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆ*0ಕಿ…!

ವಿಟ್ಲ: ಪೊಲೀಸರೊಂದಿಗೆ ಅನುಚಿತ ವರ್ತನೆ, ಕರ್ತವ್ಯಕ್ಕೆ ಅಡ್ಡಿ ಆರೋಪ – ಓರ್ವನ‌ ಬಂಧನ…!

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ…!

ಹುಣಸೂರು: “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ…!

ಬಂಟ್ವಾಳ : ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಮೃತ್ತ್ಯು…!

ಮಂಗಳೂರು: ಮಾದಕ ದ್ರವ್ಯ ಕಳ್ಳಸಾಗಣೆ, ಸಹೋದರರ ಬಂಧನ….!

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪ*ತ್ತೆ….!

ಬಂಟ್ವಾಳ: ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆ*ಂಕಿ….!

ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನಾ ಸಭೆ…!

error: Content is protected !!