ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.೫ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ನಡೆದಿದೆ.
ವಿಟ್ಲದ ಖಾಸಗಿ ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದ ‘ಫಲ್ಗುಣಿ’ ಹೆಸರಿನ ಖಾಸಗಿ ಬಸ್, ನಾಲ್ಕು ರಸ್ತೆಗಳ ಜಂಕ್ಷನ್ ದಾಟಿದ ತಕ್ಷಣವೇ ತನ್ನ ಮುಂಭಾಗದಲ್ಲಿದ್ದ ಹುಂಡೈ ಕಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್ಸಿನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಬಸ್ಸು ಕಾರನ್ನು ಸುಮಾರು 50 ಅಡಿಗಳಷ್ಟು ದೂರಕ್ಕೆ ತಳ್ಳಿಕೊಂಡು ಹೋಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಮತ್ತು ಬಾಲಕ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿತ್ತು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…