ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿದ್ದ ಯುವಕನು ರಾಜಕಾಲುವೆಯ ಸುರಕ್ಷತಾ ಗ್ರಿಲ್ ಮೇಲೆ ಹತ್ತಿ, ತಾನು ಕೆಳಕ್ಕೆ ಬಿದ್ದು ಸಾಯುವುದಾಗಿ ಕೂಗಾಡಿದ್ದು, ಯುವಕನ ಈ ಹೈಡ್ರಾಮಾದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ಯುವಕನ ಅಪಾಯಕಾರಿ ನಡವಳಿಕೆಯನ್ನು ಗಮನಿಸಿದ ಸ್ಥಳೀಯರು ಯುವಕನನ್ನು ಸಮಾಧಾನಪಡಿಸಿ, ಆತನನ್ನು ಗ್ರಿಲ್ನಿಂದ ಸುರಕ್ಷಿತವಾಗಿ ಕೆಳಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಯುವಕನನ್ನು ಹಿಡಿದು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದು, ಯುವಕನ ಈ ರೀತಿ ವರ್ತಿಸಲು ಕಾರಣವೇನು ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.



