ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಯಾಪಲದಿನ್ನಿ ಗ್ರಾಮದ ಈಶಪ್ಪ ಕೊಲೆಯಾದ ದುರ್ದೈವಿ. ಘಟನೆ ನಡೆದ ರಾತ್ರಿ ಈಶಪ್ಪ ತಮ್ಮ ಮನೆಯ ಮಾಳಿಗೆಯ ಮೇಲೆ ಮಲಗಿದ್ದರು. ಈ ವೇಳೆ ಅನ್ಯ ಧರ್ಮದ ಯುವಕ ಅಸ್ಲಂ ಮತ್ತು ಆತನ ಸ್ನೇಹಿತರು ಸೇರಿ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿರುವುದನ್ನು ಈಶಪ್ಪ ಗಮನಿಸಿದ್ದಾರೆ. ಅನ್ಯಕೋಮಿನ ಯುವಕರು ಕರೆದೊಯ್ಯುತ್ತಿರುವ ಅಪ್ರಾಪ್ತ ತನ್ನ ಸ್ನೇಹಿತ ಆಂಜನೇಯನ ತಮ್ಮನ ಮಗಳಾಗಿದ್ದರಿಂದ, ಈಶಪ್ಪ ತಕ್ಷಣ ಮಾಳಿಗೆಯಿಂದ ಕೆಳಗಿಳಿದು ಬಂದು ಯುವಕರನ್ನು ತಡೆದು, ‘ಬಾಲಕಿಯನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ತಮ್ಮ ಕೃತ್ಯಕ್ಕೆ ಅಡ್ಡಿಯಾದ ಈಶಪ್ಪನ ಮೇಲೆ ಆಕ್ರೋಶಗೊಂಡ ಅಸ್ಲಂ ಮತ್ತು ಆತನ ಗ್ಯಾಂಗ್, ಹಗ್ಗ ಅಥವಾ ವೈರ್ನಿಂದ ಈಶಪ್ಪನ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…