ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಅವರೊಂದಿಗೆ ಪಕ್ಷದ ಒಂಭತ್ತು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಟಿವಿಕೆ ಸರ್ಕಾರ ಅಧಿಕೃತವಾಗಿ ಅಧಿಕಾರಕ್ಕೆ ಬಂದಿದೆ.
ರಾಜಭವನದ ವತಿಯಿಂದ ನಡೆದ ಸಮಾರಂಭದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ವಿಜಯ್ ಹಾಗೂ ನೂತನ ಸಚಿವರಿಗೆ ಹುದ್ದೆ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಸಮಾರಂಭಕ್ಕೆ ರಾಜಕೀಯ ನಾಯಕರು, ಸಿನಿರಂಗದ ಗಣ್ಯರು ಹಾಗೂ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ನೂತನ ಸಚಿವ ಸಂಪುಟದಲ್ಲಿ ಎನ್. ಆನಂದ್, ಅಧವ ಅರ್ಜುನ, ಡಾ. ಕೆ.ಜಿ. ಅರುಣರಾಜ್, ಕೆ.ಎ. ಸೆಂಗೊಟ್ಟೆಯನ್, ಪಿ. ವೆಂಕಟರಮಣನ್, ಆರ್. ನಿರ್ಮಲ ಕುಮಾರ್, ರಾಜಮೋಹನ್, ಟಿ.ಕೆ. ಪ್ರಭು ಹಾಗೂ ಎಸ್. ಕೀರ್ತನಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸಚಿವರಿಗೆ ಖಾತೆಗಳ ಹಂಚಿಕೆಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಟಿವಿಕೆ ಸರ್ಕಾರದ ಮೊದಲ ಸಚಿವ ಸಂಪುಟವು ಹಿರಿಯರ ಅನುಭವ, ಯುವಶಕ್ತಿ, ತಂತ್ರಜ್ಞರ ನಿಷ್ಠೆ ಹಾಗೂ ವೃತ್ತಿಪರ ಸಾಮರ್ಥ್ಯದ ಸಮನ್ವಯವನ್ನು ಒಳಗೊಂಡಿದೆ. ಆಡಳಿತದಲ್ಲಿ ಹೊಸ ಚಿಂತನೆಗಳನ್ನು ಪರಿಚಯಿಸುವ ಜೊತೆಗೆ ನಿರಂತರತೆಯನ್ನು ಕಾಪಾಡುವ ಉದ್ದೇಶವನ್ನು ಈ ತಂಡ ಪ್ರತಿಬಿಂಬಿಸುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿರುವ ಟಿವಿಕೆ ಸರ್ಕಾರದ ಮೇಲೆ ಜನರಲ್ಲಿ ಭಾರೀ ನಿರೀಕ್ಷೆ ಮೂಡಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…