ಹಾವೇರಿಯ ಕಬ್ಬೂರು ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕುಡಿದ ಮತ್ತಿನಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಹಾವೇರಿಯ ಕಬ್ಬೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.ನಿಂಗಪ್ಪ ಚನ್ನಬಸಪ್ಪ ಕರಿಗಾರ್ (40) ಕೊಲೆಯಾದ ದುರ್ದೈವಿ.
ಶಿವು ನಿಂಗಪ್ಪ ಪಟ್ಟೇದ ಎಂಬಾತ ಈ ಭೀಕರ ಕೃತ್ಯದಲ್ಲಿ ಆರೋಪಿ. ಮೃತ ನಿಂಗಪ್ಪ-ಆರೋಪಿ ಶಿವು ಮನೆಗಳು ಅಕ್ಕಪಕ್ಕದಲ್ಲಿವೆ.
ಇಬ್ಬರಿಗೂ ಕುಡಿತದ ಚಟವಿತ್ತು. ಹಳೆಯ ವೈಷಮ್ಯವೇ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಸುಮಾರು ಒಂದು ತಿಂಗಳ ಹಿಂದೆ ಇಬ್ಬರ ನಡುವೆ ಜಗಳ ಆಗಿತ್ತು. ಈಮೊದಲೇ ಒಂದು ಬಾರಿ ತಲೆಗೆ ಗಾಯಗಳಾಗುವಂತೆ ಆರೋಪಿ ಶಿವು ಹೊಡೆದಿದ್ದ ಎನ್ನಲಾಗಿದೆ. ಗ್ರಾಮದ ಹಿರಿಯರು ಸೇರಿ ಇಬ್ಬರ ನಡುವೆ ರಾಜಿ ಮಾಡಿಸಿದ್ದರೂ ಸಹ ಶಾಂತಿ ಉಳಿಯಲಿಲ್ಲ.ಇಂದು ಬೆಳಿಗ್ಗೆ ಮತ್ತೆ ಏಕಾಏಕಿ ಹಲ್ಲೆ ಶಿವು ಹಲ್ಲೆ ಮಾಡಿದ. ತಲೆಗೆ ಬಲವಾಗಿ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ನಿಂಗಪ್ಪ ಸಾವನ್ನಪ್ಪಿದ. “ನಾನೇ ಕೊಲೆ ಮಾಡಿದ್ದೇನೆ” ಎಂದು ಪೊಲೀಸರ ಮುಂದೆ ಆರೋಪಿ ಶಿವು ಶರಣಾಗಿದ್ದಾನೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಸಂಭವಿಸಿದೆ.…
ಎನ್ಆರ್ಜೆ ಕರ್ನಾಟಕ ಸೀನಿಯರ್ ಸ್ಟೇಟ್ ಲೆವೆಲ್ ಸ್ವಿಮ್ಮಿಂಗ್ ಮೀಟ್ – 2026ರಲ್ಲಿ ಈಜುಗಾರ ಚಿಂತನ್ ಎಸ್ ಶೆಟ್ಟಿ ಅತ್ಯುತ್ತಮ ಸಾಧನೆ…
ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ಕಳ್ಳರನ್ನು ಕೇವಲ 2 ಗಂಟೆಯಲ್ಲಿ…
ಅಪಘಾತದಲ್ಲಿ ಮೃತಪಟ್ಟ ತನ್ನ ಭಾವಿ ಪತಿಯ ಪಕ್ಕದಲ್ಲೇ ತನ್ನನ್ನೂ ಸಮಾಧಿ ಮಾಡಬೇಕೆಂಬ ಯುವತಿಯ ಅಂತಿಮ ಬಯಕೆಯನ್ನು ಕುಟುಂಬಸ್ಥರು ಈಡೇರಿಸಿದ…
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಜೋಸೆಫ್ ವಿಜಯ್ ಅವರು ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಹತ್ವದ ಆಡಳಿತಾತ್ಮಕ ನಿರ್ಧಾರಗಳನ್ನು…
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ…