ದ.ಕ.ಜಿಲ್ಲೆಯ ಜೀವನಾಡಿಯಾಗಿರುವ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ಬಿಸಿಲಿನ ತಾಪ ಇನ್ನಷ್ಟು ಹೆಚ್ಚಳವಾದರೆ ನೀರಿನ ಮಟ್ಟ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಗಳಿವೆ.
ಬಂಟ್ವಾಳ ಜಕ್ರಿಬೆಟ್ಟು ಡ್ಯಾಂ ನ ಕೆಳಭಾಗದಿಂದ ಪಾಣೆಮಂಗಳೂರು ನೂತನ ಸೇತುವೆವರೆಗೆ ನದಿಯಲ್ಲಿ ನೀರಿಲ್ಲದೆ ಬತ್ತಿಹೋಗಿದ್ದು, ಮರಳು ಮತ್ತು ಕಲ್ಲುಗಳು ಎದ್ದು ಕಾಣುತ್ತಿವೆ. ಬಂಟ್ವಾಳ ತಾಲೂಕಿನಲ್ಲಿ ಕುಡಿಯುವ ನೀರಿಗೆ ಯಾವುದೇ ಅಭಾವ ತಲೆತೊರದಿದ್ದರೂ, ಕುಡಿಯುವ ನೀರು ಪೂರೈಕೆ ಮತ್ತು ಬಳಕೆಯ ಬಗ್ಗೆ ಅಧಿಕಾರಿಗಳು ಜಾಗೃತೆವಹಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಗಳೂರು ನಗರಕ್ಕೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವನ್ನು ಜಿಲ್ಲಾಧಿಕಾರಿ ಅವರು ವಹಿಸಿ, ಅದೇಶವೊಂದನ್ನು ಹೊರಡಿಸಿದ್ದಾರೆ. ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು , ಇತರೆ ಉದ್ದೇಶಗಳಿಗಾಗಿ ಬಳಸದಂತೆಯೂ ಸೂಚನೆ ನೀಡಿದ್ದಾರೆ. ಅಲ್ಲದೆ ಎ.ಎಂ.ಆರ್.ಡ್ಯಾಮ್ ನಿಂದ ತುಂಬೆ ಡ್ಯಾಂ ಗೆ ನೀರು ಬಿಡುಗಡೆಗೊಳಿಸುವಂತೆ ಸೂಚಿಸಿದ್ದಾರೆ. ಮಂಗಳೂರು ನಗರದ ಕುಡಿಯುವ ನೀರಿನ ನಿರ್ವಹಣೆ: ಜಿಲ್ಲಾಧಿಕಾರಿಗಳ ಕಚೇರಿಯಿಂದ ಮಹತ್ವದ ಆದೇಶ ಹೊರಡಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…