ಅಪಘಾತದಲ್ಲಿ ಮೃತಪಟ್ಟ ತನ್ನ ಭಾವಿ ಪತಿಯ ಪಕ್ಕದಲ್ಲೇ ತನ್ನನ್ನೂ ಸಮಾಧಿ ಮಾಡಬೇಕೆಂಬ ಯುವತಿಯ ಅಂತಿಮ ಬಯಕೆಯನ್ನು ಕುಟುಂಬಸ್ಥರು ಈಡೇರಿಸಿದ ಹೃದಯವಿದ್ರಾವಕ ಘಟನೆ ಕೇರಳದ ಮಂಜೇಶ್ವರದಲ್ಲಿ ನಡೆದಿದೆ.
ತಮಿಳುನಾಡಿನ ತಿರುನಲ್ವೇಲಿಯಲ್ಲಿ ಮೃತ ಯುವಕ ಮಣಿಯ ಸಮಾಧಿಯ ಪಕ್ಕದಲ್ಲೇ ವಧು ಪ್ರಫುಲ್ಲಾ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಸಾವಿನಲ್ಲೂ ಈ ಪ್ರೇಮಿಗಳು ಒಂದಾಗಿದ್ದಾರೆ. ಮಂಜೇಶ್ವರದ ಕಿದೂರು ಕುಂಡಂಗೇರಡುಕ ನಿವಾಸಿ ಜಯಾನಂದ ಅವರ ಪುತ್ರಿ ಪ್ರಫುಲ್ಲಾ ಕಳೆದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತಮಿಳುನಾಡು ಮೂಲದ ಬ್ಯಾಂಕ್ ಉದ್ಯೋಗಿ ಮಣಿ ಮತ್ತು ಪ್ರಫುಲ್ಲಾ ಅವರ ವಿವಾಹ ನಿಶ್ಚಯ ನಾಲ್ಕು ತಿಂಗಳ ಹಿಂದೆ ನಡೆದಿತ್ತು. ಆದರೆ, ಹತ್ತು ದಿನಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದಾರೆ. ಮಣಿಯ ಸಾವಿನಿಂದ ತೀವ್ರ ಮನನೊಂದು ಖಿನ್ನತೆಗೆ ಒಳಗಾಗಿದ್ದ ಪ್ರಫುಲ್ಲಾ, “ನನ್ನನ್ನು ಮಣಿಯ ಪಕ್ಕದಲ್ಲೇ ಮಣ್ಣು ಮಾಡಬೇಕು” ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಮಗಳ ಅಂತಿಮ ಆಸೆಯನ್ನು ಗೌರವಿಸಿದ ತಂದೆ ಜಯಾನಂದ ಹಾಗೂ ಕುಟುಂಬಸ್ಥರು, ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಪರ್ಣಗೊಂಡ ಬಳಿಕ, ಪ್ರಫುಲ್ಲಾ ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ತಮಿಳುನಾಡಿನ ವಳ್ಳಿಯೂರು ಗ್ರಾಮಕ್ಕೆ ಕೊಂಡೊಯ್ಯದರು. ಅಲ್ಲಿ ಧರ್ಮಿಕ ವಿಧಿವಿಧಾನಗಳೊಂದಿಗೆ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲಾ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ನೋವಿನ ಕ್ಷಣಕ್ಕೆ ಸಾಕ್ಷಿಯಾದ ಎರಡೂ ಕುಟುಂಬದವರು ಹಾಗೂ ಗ್ರಾಮಸ್ಥರು ಭಾವುಕರಾದರು. ಪ್ರೀತಿಪಾತ್ರನ ಅಗಲಿಕೆಯನ್ನು ತಾಳಲಾರದೆ ಪ್ರಾಣತ್ಯಾಗ ಮಾಡಿದ ಯುವತಿಯ ಅಂತಿಮ ಆಸೆ ಕೊನೆಗೂ ಈಡೇರಿದ ಘಟನೆ ಸ್ಥಳೀಯರಲ್ಲಿ ಕಣ್ಣೀರನ್ನು ತರಿಸಿತು.
ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಸಂಭವಿಸಿದೆ.…
ಎನ್ಆರ್ಜೆ ಕರ್ನಾಟಕ ಸೀನಿಯರ್ ಸ್ಟೇಟ್ ಲೆವೆಲ್ ಸ್ವಿಮ್ಮಿಂಗ್ ಮೀಟ್ – 2026ರಲ್ಲಿ ಈಜುಗಾರ ಚಿಂತನ್ ಎಸ್ ಶೆಟ್ಟಿ ಅತ್ಯುತ್ತಮ ಸಾಧನೆ…
ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ಕಳ್ಳರನ್ನು ಕೇವಲ 2 ಗಂಟೆಯಲ್ಲಿ…
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಜೋಸೆಫ್ ವಿಜಯ್ ಅವರು ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಹತ್ವದ ಆಡಳಿತಾತ್ಮಕ ನಿರ್ಧಾರಗಳನ್ನು…
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ…
ದ.ಕ.ಜಿಲ್ಲೆಯ ಜೀವನಾಡಿಯಾಗಿರುವ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ಬಿಸಿಲಿನ ತಾಪ ಇನ್ನಷ್ಟು ಹೆಚ್ಚಳವಾದರೆ…