ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ ವೇಳೆ ಬೇಟಿ ನೀಡಿದ್ದಾರೆ.

ಮೇ. 16 ರ ಸಂಜೆ ವೇಳೆ ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ದೇವರ ಗರ್ಭಗುಡಿಯ ಮೇಲಿನ ಪ್ರಾಕಾರಕ್ಕೆ ಸಿಡಿಲು ಬಡಿದು ಅಪಾರ ನಷ್ಟವುಂಟಾಗಿತ್ತು.

ಕ್ಷೇತ್ರಕ್ಕೆ ರಾತ್ರಿಯೇ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅವರು ಬೇಟಿ ನೀಡಿ ದೇವಸ್ಥಾನದ ಪ್ರಮುಖರ ಜೊತೆ ಮಾತನಾಡಿದರು.

ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್, ಪುರುಷೋತ್ತಮ ಪೂಜಾರಿ ಮತ್ತಿತರರು ಹಾಜರಿದ್ದರು.



