ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ ಕುಕ್ಕಾಜೆ ಎಂಬಲ್ಲಿ ನಡೆದಿದೆ.
ಕುರಿಯಾಳ ಗ್ರಾಮದ ಕುಕ್ಕಾಜೆ ಕೇಶವ ಪೂಜಾರಿ ಎಂಬವರ ಬಾವಿಯ ಹೂಳೆತ್ತುವುದಕ್ಕೆ ಬಂದ ಬರಿಮಾರು ನಿವಾಸಿಗಳಾದ ಪದ್ಮನಾಭ ಮತ್ತು ರಾಮ ಎಂಬವರು ಬಾವಿಗೆ ಬಿದ್ದಿದ್ದು, ಅದರಲ್ಲಿ ಒರ್ವರ ಕಾಲಿಗೆ ಗಾಯವಾಗಿದೆ.
ಇವರು ಬಾವಿಯ ಹೂಳೆತ್ತುವ ಕೆಲಸ ಮುಗಿಸಿ, ವಾಪಸು ಬಾವಿಯೊಳಗಿನಿಂದ ಮೇಲೆ ಹಗ್ಗ ಹಿಡಿದು ಮೇಲೆಕ್ಕೆ ಬರುತ್ತಿದ್ದ ವೇಳೆ ಹಗ್ಗ ಕಡಿದು ಬಿದ್ದಿದ್ದಾರೆ. ಸುಮಾರು 40 ಅಡಿ ಆಳದ ಬಾವಿ ಇದಾಗಿದ್ದು, ಅರ್ಧಕ್ಕೆ ಬರುತ್ತಿದ್ದಂತೆ ಹಗ್ಗ ಕಡಿದಿದೆ. ಬಾವಿಯೊಳಗೆ ಬಿದ್ದ ಇಬ್ಬರಲ್ಲಿ ಒಬ್ಬರ ಕಾಲಿಗೆ ಸಣ್ಣಪುಟ್ಟ ಗಾಯವಾಗಿದ್ದು ಇನ್ನೊಬ್ಬರು ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಹಗ್ಗ ಕಡಿದು ಬಾವಿಯೊಳಗೆ ಬಿದ್ದ ಇವರನ್ನು ಸುರಕ್ಷಿತವಾಗಿ ಮೇಲೆತ್ತುವ ಕಾರ್ಯ ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ನಡೆದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…