ದಕ್ಷಿಣ ಕನ್ನಡ : ಏಷ್ಯಾ ಅಂತರಾಷ್ಟ್ರೀಯ ಸಾಂಸ್ಕೃತಿಕ ಅಕಾಡೆಮಿ ಕೊಡ ಮಾಡುವ ಗೌರವ ಡಾಕ್ಟರೇಟ್ ಪದವಿಯು ಅಭಿಮತ ವಾಹಿನಿಯ ಮುಖ್ಯಸ್ಥರಾದ ಮಮತಾ ಪ್ರವೀಣ್ ಶೆಟ್ಟಿ ಇವರಿಗೆ ತಮಿಳುನಾಡಿನ ಕ್ಲಾರೆಷ್ಟ ಹೋಟೆಲ್ ನ ಸಭಾಂಗಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಮಮತಾ ಶೆಟ್ಟರ ಮಾಧ್ಯಮ ಕ್ಷೇತ್ರದ ಅಪ್ರತಿಮ ಸಾಧನೆಯನ್ನ ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಮಮತಾ ಪ್ರವೀಣ್ ಶೆಟ್ಟರು ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಬಂಟ್ವಾಳ ತಾಲೂಕಿನ ಮಂಚಿಯಲ್ಲಿ ಪೂರೈಸಿದವರಾಗಿದ್ದು ಪದವಿ ಶಿಕ್ಷಣವನ್ನು ಮಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿರುತ್ತಾರೆ.
ಬಾಲ್ಯದಿಂದಲೇ ನೃತ್ಯ, ನಿರೂಪಣೆ, ನಾಟಕ, ಹಾಗೂ ಕ್ರೀಡೆಯಲ್ಲಿ ಆಸಕ್ತಿ ಹೊಂದಿದವರಾಗಿದ್ದು ಇದುವರೆಗೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಮಮತಾರವರಿಗೆ ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿ ಲಾಂಗ್ ಜಂಪ್, ಹೈ ಜಂಪ್, ಓಟ, ಕಬಡ್ಡಿ, ವಾಲಿಬಾಲ್,ಖೋ ಖೋ, ಹಾಗೂ ಇನ್ನಿತರ ಕ್ರೀಡೆಗಳಿಗೆ ಸಂಬಂಧಿಸಿ ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಹಲವು ಪ್ರಶಸ್ತಿಗಳು ಅರಸಿ ಬಂದಿವೆ.
ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಮಾಡಿದ ಸಾಧನೆಗಾಗಿ ಮಮತಾ ಪ್ರವೀಣ್ ಶೆಟ್ಟರಿಗೆ ಅಂದಿನ ರಾಜ್ಯಪಾಲರಾದ ರಮಾದೇವಿಯವರು ರಾಜ್ಯ ಪುರಸ್ಕಾರವನ್ನುತ್ತು ಸನ್ಮಾನಿಸಿದ್ದರು, ಅಲ್ಲದೆ ಮೂಡಬಿದಿರೆ ಸರ್ವಿಸ್ ಕೋ ಆಪರೇಟಿವ್ ಬ್ಯಾಂಕ್ ನ ಉತ್ತಮ ಮಾಧ್ಯಮ ಕ್ಷೇತ್ರದ ಗೌರವಕ್ಕೂ ಪಾತ್ರರಾಗಿದ್ದರು.
ಹಲವು ವರ್ಷಗಳ ಕಾಲ ಕರ್ನಾಟಕದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಕೆಲಸ ನಿರ್ವಹಿಸಿ ಅನುಭವ ಗಳಿಸಿದ ಮಮತಾ ರವರು ನಂತರದಲ್ಲಿ ತನ್ನದೇ ಮಾಲಕತ್ವದ ಅಭಿಮತ ದೃಶ್ಯ ಮಾಧ್ಯಮ ಸಂಸ್ಥೆಯನ್ನು ಸ್ಥಾಪಿಸಿ ಯಶಸ್ಸುಗಳಿಸಿದವರಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಸುದ್ದಿ ವಾಹಿನಿಯೊಂದನ್ನು ನಡೆಸುತ್ತಿರುವ ಮೊದಲ ಹಾಗೂ ಏಕೈಕ ಮಹಿಳೆಯಾಗಿದ್ದು, ನೇರ ನಡೆನುಡಿಯ ಶೆಟ್ಟರು ಬೆದರಿಕೆಗೆ ಅಂಜದೆ, ನೈಜ್ಯ ಸುದ್ದಿಯನ್ನು ಪ್ರಕಟಿಸಿ ಹಲವು ಬಲಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದು ಉಂಟು, ಸಾಧಕರ ಬದುಕು, ಕೃಷಿ ಮಾಹಿತಿ, ರಾಜಕೀಯ,ಜಾನಪದ,ಕಂಬಳ, ಹೀಗೆ ಎಲ್ಲಾ ವಿಚಾರಗಳ ಬಗ್ಗೆ ಮಾಧ್ಯಮದಲ್ಲಿ ಪ್ರಕಟಿಸಿ ಜನರಿಂದ ಭೇಷ್ ಎಂದು ಕರೆಸಿಕೊಂಡ ಮಹಿಳೆಯಾಗಿದ್ದು, ದೃಶ್ಯಮಾಧ್ಯಮದ ಜೊತೆಗೆ ಸೋಶಿಯಲ್ ಮೀಡಿಯಾಗಳಲ್ಲೂ ಸುದ್ದಿ ಪ್ರಕಟಿಸುವ ಇವರು ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕದ ಎಲ್ಲ ಕಡೆಗಳಿಗೆ ದೃಶ್ಯಮಾಧ್ಯಮವನ್ನು ವಿಸ್ತರಿಸುವ ಯೋಚನೆಯುಳ್ಳವರಾಗಿದ್ದು ಇವರ ಈ ಎಲ್ಲಾ ಸಾಧನೆಯನ್ನು ಗುರುತಿಸಿ ಅಂತರರಾಷ್ಟ್ರೀಯ ಸಾಂಸ್ಕೃತಿಕ ಅಕಾಡೆಮಿ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದೆ.
ಮೀನಾಕ್ಷಿ ಮತ್ತು ಮೋಹನ ಶೆಟ್ಟರ ಮಗಳಾದ ಮಮತಾ ರವರು ಪತಿ ಪ್ರವೀಣ್ ಹಾಗೂ ಎರಡು ಮಕ್ಕಳ ತುಂಬು ಸಂಸಾರದ ಜೀವನ ನಡೆಸುತ್ತಿದ್ದು, ಮಮತಾ ಶೆಟ್ಟರಿಂದ ಇನ್ನಷ್ಟು ಸಮಾಜ ಸೇವೆ, ವಸ್ತುನಿಷ್ಠ ಮಾಧ್ಯಮ ಸೇವೆ ಸಿಗಲಿ ಎಂದು ಆಶಿಸೋಣ, ಹಾರೈಸೋಣ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…