ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ.

ಬಿಸಿರೋಡಿನ ಪುರಸಭಾ ಅಧೀನದಲ್ಲಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಇರುವ ಬೂಡ ಕಚೇರಿಯ ಬಾಗಿಲಿನಲ್ಲಿ ಕಸದ ರಾಶಿ ಬಿದ್ದಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಬೂಡ ಕಚೇರಿಯ ಪಕ್ಕದಲ್ಲಿ ಇರುವ ಸಲೂನ್ ಒಂದರ ತ್ಯಾಜ್ಯ ವಸ್ತುಗಳನ್ನು ಬೂಡ ಕಚೇರಿಗೆ ಬರುವ ದಾರಿಯಲ್ಲಿ ಹಾಕಲಾಗಿದ್ದು, ಕಚೇರಿಗೆ ಬರುವ ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. ಆದರೂ ಬೂಡ ಕಚೇರಿಯ ಅಧ್ಯಕ್ಷರಾಗಲಿ, ಅಧಿಕಾರಿಯಾಗಲಿ ಚಕಾರವೆತ್ತಿಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತಲೆಕೂದಲಿನ ರಾಶಿ ಇಡೀ ಕಟ್ಟಡದಲ್ಲಿ ಹರಡಿದೆ. ಕಟ್ಟಡದ ಕೆಳಭಾಗದಲ್ಲಿ ಕ್ಯಾಂಟೀನ್ ಕೂಡ ಇದ್ದು, ತಲೆಕೂದಲಿನ ರಾಶಿ ಮತ್ತು ಚೆಲ್ಲಾಪಿಲ್ಲಿಯಾದ ದೃಶ್ಯ ಕಂಡು ಗಾಳಿಯಲ್ಲಿ ಇಲ್ಲಿನ ಆಹಾರವನ್ನು ಸೇರಬಹುದೇ ಎಂಬ ಆತಂಕವನ್ನು ಕೂಡ ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸಂಬಂಧಿಸಿದ ಇಲಾಖೆ ಅಂಗಡಿ ಮಾಲಕರಿಗೆ ಸೂಕ್ತವಾದ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

error: Content is protected !!