ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ.
ಬಿಸಿರೋಡಿನ ಪುರಸಭಾ ಅಧೀನದಲ್ಲಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಇರುವ ಬೂಡ ಕಚೇರಿಯ ಬಾಗಿಲಿನಲ್ಲಿ ಕಸದ ರಾಶಿ ಬಿದ್ದಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಬೂಡ ಕಚೇರಿಯ ಪಕ್ಕದಲ್ಲಿ ಇರುವ ಸಲೂನ್ ಒಂದರ ತ್ಯಾಜ್ಯ ವಸ್ತುಗಳನ್ನು ಬೂಡ ಕಚೇರಿಗೆ ಬರುವ ದಾರಿಯಲ್ಲಿ ಹಾಕಲಾಗಿದ್ದು, ಕಚೇರಿಗೆ ಬರುವ ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. ಆದರೂ ಬೂಡ ಕಚೇರಿಯ ಅಧ್ಯಕ್ಷರಾಗಲಿ, ಅಧಿಕಾರಿಯಾಗಲಿ ಚಕಾರವೆತ್ತಿಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತಲೆಕೂದಲಿನ ರಾಶಿ ಇಡೀ ಕಟ್ಟಡದಲ್ಲಿ ಹರಡಿದೆ. ಕಟ್ಟಡದ ಕೆಳಭಾಗದಲ್ಲಿ ಕ್ಯಾಂಟೀನ್ ಕೂಡ ಇದ್ದು, ತಲೆಕೂದಲಿನ ರಾಶಿ ಮತ್ತು ಚೆಲ್ಲಾಪಿಲ್ಲಿಯಾದ ದೃಶ್ಯ ಕಂಡು ಗಾಳಿಯಲ್ಲಿ ಇಲ್ಲಿನ ಆಹಾರವನ್ನು ಸೇರಬಹುದೇ ಎಂಬ ಆತಂಕವನ್ನು ಕೂಡ ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸಂಬಂಧಿಸಿದ ಇಲಾಖೆ ಅಂಗಡಿ ಮಾಲಕರಿಗೆ ಸೂಕ್ತವಾದ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…