ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಗೂಡಿನ ಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಅವರ ಮೃತದೇಹ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಪಾಣೆಮಂಗಳೂರು ನೂತನ ಸೇತುವೆ ಕೆಳಭಾಗದಲ್ಲಿ ಸಿಕ್ಕಿದೆ.
ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ಮಾಡುತ್ತಿದ್ದ ವೇಳೆ ಮೃತದೇಹ ನದಿಯಲ್ಲಿ ಕಂಡು ಬಂದಿದ್ದು, ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಂಟ್ವಾಳ ಪೋಲೀಸರು ಹಾಗೂ ಗೂಡಿನಬಳಿಯ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ, ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣಕ್ಕಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣದಲ್ಲಿ ಇಡಲಾಗಿತ್ತು.
ಸಂಜೆ ವೇಳೆ ಮೃತದೇಹದ ಗುರುತು ಪತ್ತೆಯಾಗಿದ್ದು, ಗೂಡಿನ ಬಳಿ ನಿವಾಸಿ ಇರ್ಫಾನ್ ಎಂದು ಹೇಳಲಾಗಿದೆ. ಕಳೆದ ಮೂರು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಈತ ಮೂರು ವರ್ಷಗಳ ಹಿಂದೆಯಷ್ಟೆ ಊರಿಗೆ ಮರಳಿ ಬಳಿಕ ಸ್ವಂತ ರಿಕ್ಷಾ ಖರೀದಿಸಿ ಅದರಲ್ಲಿ ದುಡಿಯುತ್ರಿದ್ದ. ವಿವಾಹಿತನಾಗಿರುವ ಈತನಿಗೆ ಮೂವರು ಮಕ್ಕಳಿದ್ದಾರೆ. ಆದರೆ ಮೂರು ದಿನಗಳಿಂದ ಈತ ಕಾಣೆಯಾಗಿದ್ದ ಎಂದು ಹೇಳಲಾಗಿದ್ದು, ಇಂದು ಬೆಳಿಗ್ಗೆ ಈತನ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಮೃತದೇಹದ ಕೈ ಗಳಲ್ಲಿ ಗಾಯಗಳಿರುವುದರಿಂದ ಸಾವಿನಲ್ಲಿ ಸಂಶಯವಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಅಲ್ಲದೆ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ನ್ಯಾಯ ಒದಗಿಸಿಕೊಡುವಂತೆ ಕುಟುಂಬ ಮೂಲಗಳು ಪಟ್ಟು ಹಿಡಿದಿದ್ದಾರೆ. ಆಸ್ಪತ್ರೆಯಲ್ಲಿ ನೂರಾರು ಜನರು ಜಮಾಯಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…