ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಶಕ್ಕೆ ಪಡೆದ ಪೊಲೀಸರು ಎರಡು ಜಾನುವಾರುವನ್ನು ವಶಕ್ಕೆ ಪಡೆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಪಂಜರಕೋಡಿ ಎಂಬಲ್ಲಿ ನಡೆದಿದೆ.
ಬಳಿಕದ ಬೆಳವಣಿಗೆಯಲ್ಲಿ ಜಾನುವಾರು ಸಾಗಾಟ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕಾರು ಚಾಲಕ ವಾಹನವನ್ನು ಪೊಲೀಸರ ಮೇಲೆ ಹತ್ತಿಸಲು ಪ್ರಯತ್ನಿಸಿದ ಘಟನೆಯೂ ನಡೆದಿದೆ. ಘಟನೆಗೆ ಸಂಬ0ಧಿಸಿದ0ತೆ ಆರೋಪಿ ಚಾಲಕ ಬಂಟ್ವಾಳ ತಾಲೂಕು ಬಾಳೆಪುಣಿ ನಿವಾಸಿ ಮೊಹಮ್ಮದ್ ಹನೀಪ್ ಹಾಗೂ ಕಾರು ಚಾಲಕ ಬಶೀರ್ ಎಂಬವರ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಹನವೊಂದರಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿರುವ ಬಗ್ಗೆ ಮೇ. 21ರಂದು ವಿಟ್ಲ ಪೊಲೀಸ್ ಠಾಣಾ ಎಸ್.ಐ. ರಾಮಕೃಷ್ಣ ರವರಿಗೆ ಖಚಿತ ಮಾಹಿತಿ ಲಭಿಸಿದ್ದು, ಅದರಂತೆ ಸಿಬ್ಬಂದಿಗಳೊ0ದಿಗೆ ಬಂಟ್ವಾಳ ಕೊಳ್ನಾಡು ಪಂಜರಕೋಡಿ ಎಂಬಲ್ಲಿ ಆ ದಾರಿಯಾಗಿ ಬಂದ ಪಿಕಪ್ ವಾಹಮವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅದರಲ್ಲಿ ಎರಡು ಜಾನುವಾರುಗಳು ಪತ್ತೆಯಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…