ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಶಕ್ಕೆ ಪಡೆದ ಪೊಲೀಸರು ಎರಡು ಜಾನುವಾರುವನ್ನು ವಶಕ್ಕೆ ಪಡೆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಪಂಜರಕೋಡಿ ಎಂಬಲ್ಲಿ ನಡೆದಿದೆ.
ಬಳಿಕದ ಬೆಳವಣಿಗೆಯಲ್ಲಿ ಜಾನುವಾರು ಸಾಗಾಟ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕಾರು ಚಾಲಕ ವಾಹನವನ್ನು ಪೊಲೀಸರ ಮೇಲೆ ಹತ್ತಿಸಲು ಪ್ರಯತ್ನಿಸಿದ ಘಟನೆಯೂ ನಡೆದಿದೆ. ಘಟನೆಗೆ ಸಂಬ0ಧಿಸಿದ0ತೆ ಆರೋಪಿ ಚಾಲಕ ಬಂಟ್ವಾಳ ತಾಲೂಕು ಬಾಳೆಪುಣಿ ನಿವಾಸಿ ಮೊಹಮ್ಮದ್ ಹನೀಪ್ ಹಾಗೂ ಕಾರು ಚಾಲಕ ಬಶೀರ್ ಎಂಬವರ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಹನವೊಂದರಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿರುವ ಬಗ್ಗೆ ಮೇ. 21ರಂದು ವಿಟ್ಲ ಪೊಲೀಸ್ ಠಾಣಾ ಎಸ್.ಐ. ರಾಮಕೃಷ್ಣ ರವರಿಗೆ ಖಚಿತ ಮಾಹಿತಿ ಲಭಿಸಿದ್ದು, ಅದರಂತೆ ಸಿಬ್ಬಂದಿಗಳೊ0ದಿಗೆ ಬಂಟ್ವಾಳ ಕೊಳ್ನಾಡು ಪಂಜರಕೋಡಿ ಎಂಬಲ್ಲಿ ಆ ದಾರಿಯಾಗಿ ಬಂದ ಪಿಕಪ್ ವಾಹಮವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅದರಲ್ಲಿ ಎರಡು ಜಾನುವಾರುಗಳು ಪತ್ತೆಯಾಗಿದೆ.
ಪ್ರತಿವರ್ಷ ಆಯೋಜಿಸಲಾಗುವ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ…
ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು,…
ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ…
ಛಾವಣಿಯ ಶೀಟ್ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ…
ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಒಂದು ಕ್ಯಾಂಟರ್ಗೆ ಢಿಕ್ಕಿ ಹೊಡೆದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಆಂಬುಲೆನ್ಸ್…
ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ ಮೃತಪಟ್ಟವರು.…