ಮಂಗಳೂರು ನಗರದ ಲಾಲ್ಬಾಗ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಪಾದಚಾರಿ ಮಾರ್ಗದ ಬದಿಯಲ್ಲೇ ಕಡಿಮೆ ಎತ್ತರದಲ್ಲಿ ಅಳವಡಿಸಲಾಗಿರುವ ಟ್ರಾನ್ಸ್ಫಾರ್ಮರ್ ಹಾಗೂ ಅದಕ್ಕೆ ಸಂಬಧಿಸಿದ ಹೈ ವೋಲ್ಟೇಜ್, ಲೋ ವೋಲ್ಟೇಜ್ ವಿದ್ಯುತ್ ಕೇಬಲ್ಗಳು ಇದ್ದು ಇದು ಅಪಾಯಕ್ಕೆ ಆಹ್ವಾನವನ್ನು ನೀಡುವಂತಿವೆ.
ಮುಂಗಾರು ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸುವ ಭೀತಿ ಹೆಚ್ಚಿದ್ದು, ಪ್ರತಿನಿತ್ಯ ಆ ಭಾಗದಲ್ಲಿ ಸಂಚರಿಸುವ ಪಾದಚಾರಿಗಳು ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ಪ್ರಶ್ನಾರ್ಥಕವಾಗಿದೆ. ಅಪಾಯದ ಸೂಚನಾ ಫಲಕಗಳು ಅಥವಾ ಮುನ್ನೆಚ್ಚರಿಕಾ ವ್ಯವಸ್ಥೆಗಳು ಅಲ್ಲಿ ಇಲ್ಲದಿರುವುದು ಅಪಾಯಕ್ಕೆ ಆಸ್ಪದವನ್ನು ನೀಡುತ್ತದೆ. ವಿದ್ಯುತ್ ಸಾಧನಗಳು ಪಾದಚಾರಿ ಮಾರ್ಗಕ್ಕೆ ಅತೀ ಸಮೀಪದಲ್ಲಿರುವುದರಿಂದ ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ.
ತಕ್ಷಣವೇ ಸಂಬಂಧಿತ ಇಲಾಖೆ ಹಾಗೂ ಸ್ಥಳೀಯ ಆಡಳಿತ ಎಚ್ಚೆತ್ತುಕೊಂಡು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಮುಂದೆ ನಡೆಯಬಹುದಾದ ಅಪಾಯವನ್ನು ತಡೆಗಟ್ಟಬೇಕು ಎಂಬುದು ಸಾರ್ವಜನಿಕ ಕಳಕಳಿಯಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…