ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಧರ್ಮಾನುಯಾಯಿಗಳಿಂದ ಬಕ್ರೀದ್ ಹಬ್ಬದ ಆಚರಣೆ

ಜಿಲ್ಲೆಯಾದ್ಯಂತ ಮುಸ್ಲಿಂ ಧರ್ಮಾನುಯಾಯಿಗಳು ಬಕ್ರೀದ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಇಂದು ಆಚರಿಸಿದ್ದಾರೆ. ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು.

ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು. ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಪೂರ್ ಈದ್ ನಮಾಝ್ ನಲ್ಲಿ ಪಾಲ್ಗೊಂಡಿದ್ದಾರೆ. ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಬ್ರಹ್ಮಗಿರಿ ನಾಯರ್‌ಕೆರೆಯ ಹಾಶಿಮಿ ಮಸೀದಿಯ ಇಮಾಮ್ ಒಬೇದುರ ರಹ್ಮಾನ್ ನದ್ವಿ ಈದ್ ವಿಶೇಷ ನಮಾಝ್ ನಿರ್ವಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!