ಜಿಲ್ಲೆಯಾದ್ಯಂತ ಮುಸ್ಲಿಂ ಧರ್ಮಾನುಯಾಯಿಗಳು ಬಕ್ರೀದ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಇಂದು ಆಚರಿಸಿದ್ದಾರೆ. ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು.
ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು. ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಪೂರ್ ಈದ್ ನಮಾಝ್ ನಲ್ಲಿ ಪಾಲ್ಗೊಂಡಿದ್ದಾರೆ. ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಬ್ರಹ್ಮಗಿರಿ ನಾಯರ್ಕೆರೆಯ ಹಾಶಿಮಿ ಮಸೀದಿಯ ಇಮಾಮ್ ಒಬೇದುರ ರಹ್ಮಾನ್ ನದ್ವಿ ಈದ್ ವಿಶೇಷ ನಮಾಝ್ ನಿರ್ವಹಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…