ಮಾನವಕುಲವು ಪ್ರಕೃತಿಯೆಡೆಗೆ ಹೆಚ್ಚಿನ ವಿನಯ, ಕರುಣೆ ಮತ್ತು ಪೂಜ್ಯಭಾವನೆಯಿಂದ ಬದುಕಬೇಕು ಎಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ ಕರೆ ನೀಡಿದ್ದಾರೆ.
ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದಿರುವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಅಮ್ಮ, ಮನುಷ್ಯನು ಸಹಮಾನವರೊಂದಿಗೆ ಸಹಕಾರದಿಂದ, ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಮತ್ತು ಈಶ್ವರನ ಜೊತೆಗೆ ಸಂಪರ್ಕವಿರಿಸಿಕೊ0ಡು ಬದುಕುವುದನ್ನು ಕಲಿಯಬೇಕು ಎಂದು ಹೇಳಿದ್ದಾರೆ. ಸಾಂಕ್ರಾಮಿಕ ರೋಗಗಳು, ನೈಸರ್ಗಿಕ ವಿಕೋಪಗಳು ಮತ್ತು ಹವಾಮಾನ ವೈಪರೀತ್ಯಗಳು ಪ್ರಕೃತಿಯೊಂದಿಗಿನ ನಮ್ಮ ಸಂಬ0ಧವನ್ನು ಮರುಚಿಂತನೆ ಮಾಡಲು ಮಾನವಕುಲಕ್ಕೆ ನೀಡುತ್ತಿರುವ ಎಚ್ಚರಿಕೆಯ ಕರೆಗಳಾಗಿವೆ ಎಂದು ಅವರು ತಿಳಿಸಿದ್ದಾರೆ. ಜನರು, ಸಮುದಾಯಗಳು ಮತ್ತು ರಾಷ್ಟ್ರಗಳ ನಡುವಿನ ಸಂಘರ್ಷಗಳಲ್ಲಿ ಸಂಧಾನ ಹಾಗೂ ರಾಜಿ ಸೂತ್ರಗಳು ಕೆಲಸ ಮಾಡಬಹುದು, ಆದರೆ ಪ್ರಕೃತಿಯೊಂದಿಗೆ ಇವುಗಳು ನಡೆಯುವುದಿಲ್ಲ ಎಂದು ಅಮ್ಮ ನುಡಿದರು. “ಪ್ರಕೃತಿಯನ್ನು ಸಮೀಪಿಸಲು ಇರುವ ಏಕೈಕ ಪರಿಣಾಮಕಾರಿ ಮಾರ್ಗವೆಂದರೆ, ಅಹಂಕಾರವನ್ನು ತೊರೆದು, ತಲೆಬಾಗಿ, ವಿನಯ, ಸ್ನೇಹ ಮತ್ತು ಪೂಜ್ಯಭಾವನೆಯಿಂದ ತುಂಬಿದ ಹೃದಯದೊಂದಿಗೆ ಆಕೆಯನ್ನು ಆರಾಧಿಸುವುದಾಗಿದೆ” ಎಂದು ಅವರು ಹೇಳಿದರು. ಮಾನವರು ಈ ಭೂಮಿ, ಅದರ ನೈಸರ್ಗಿಕ ಸಂಪನ್ಮೂಲಗಳು ಮತ್ತು ಸಮೃದ್ಧಿಯನ್ನು ಸಹಜೀವಿಗಳು ಹಾಗೂ ಇತರ ಪ್ರಾಣಿ-ಪಕ್ಷಿಗಳೊಂದಿಗೆ ಸಾಮೂಹಿಕವಾಗಿ ಹಂಚಿಕೊ0ಡು ಬದುಕಬೇಕು ಎಂಬ ಜಾಗೃತಿಯೇ ನಿಜವಾದ ಸಹಬಾಳ್ವೆಗೆ ಅಡಿಪಾಯವಾಗಿದೆ ಎಂದು ಅಮ್ಮ ಅಭಿಪ್ರಾಯಪಟ್ಟಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಲ್ಲಿ ಸ್ವಾಮಿ ಜಿತಕಾಮಾನಂದ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ,ಉಡುಪಿಯ ಶಾಸಕರಾದ ಯಶಪಾಲ್ ಸುವರ್ಣ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…