ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ..!

ಬಣ್ಣದ ಕನಸುಗಳನ್ನು ಹೊತ್ತ ಪುಟಾಣಿಗಳ ಕಣ್ಣುಗಳಲ್ಲಿ ಏನೋ ಒಂದು ಆನಂದ. ಉತ್ತಮ ಕಲಿಕೆ ಉಜ್ವಲ ಭವಿಷ್ಯವೆನ್ನುವ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯದ ಎಲ್ಲೆಡೆ ಶಾಲಾ ಶೈಕ್ಷಣಿಕ ವರ್ಷದ ಆರಂಭಕ್ಕೆ ಜೂನ್ 1 ಮುನ್ನುಡಿ ಬರೆಯಿತು.

ಸಂಭ್ರಮದ ಕಲಿಕೆಗೆ ಸ್ವಾಗತಿಸಿದ ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಮಕ್ಕಳದೇ ಕಲರವ. ಇಲ್ಲಿ ಆಯೋಜಿಸಲಾದ ಬಂಟ್ವಾಳ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ ಮಾತನಾಡಿ, “ಮಕ್ಕಳ ಮನದಲ್ಲಿ ಬಿತ್ತಿದ ಉಜ್ವಲ ಭವಿಷ್ಯದ ಅಕ್ಷರ ಬೀಜಗಳು ಹೆಮ್ಮರವಾಗಿ ನಾಡಿಗೆ ಸಂಪನ್ಮೂಲವಾಗಿ ಬೆಳಕಾಗುವುದರಲ್ಲಿ ಸಂಶಯವಿಲ್ಲ. ಪಠ್ಯ ಹಾಗೂ ಸಹಪಠ್ಯದ ಸಮತೋಲಿತ ಕಲಿಕೆ ಮಕ್ಕಳ ಸಂಸ್ಕಾರಯುತ ನಡೆಗೆ ತೆರೆದು ಪ್ರಜ್ಞಾವಂತ ಸಮಾಜದ ಅನಾವರಣಕ್ಕೆ ಕಾರಣವಾಗುತ್ತದೆ ಎಂದರು. ಇವೆಲ್ಲದಕ್ಕೂ ಕಾರಣವಾಗಿರುವ ಸರಕಾರಿ ಕನ್ನಡ ಶಾಲೆಗಳು ಮುಚ್ಚುವ ಭೀತಿಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಗಮನಾರ್ಹವಾಗಿದೆ. ಶೇಕಡಾ 100 ಫಲಿತಾಂಶದೊಂದಿಗೆ ಶಾಲೆಯ ಶೈಕ್ಷಣಿಕ ಗುಣಮಟ್ಟವು ಜನಮಾನಸದಲ್ಲಿ ಶಾಶ್ವತವಾಗಿದೆ” ಎಂದೂ ಅವರು ಹೇಳಿದ್ದಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ರಮೇಶ್ ರಾವ್ ಪತ್ತುಮುಡಿ, ಡಾ. ಗೋಪಾಲ್ ಆಚಾರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!