ಬಣ್ಣದ ಕನಸುಗಳನ್ನು ಹೊತ್ತ ಪುಟಾಣಿಗಳ ಕಣ್ಣುಗಳಲ್ಲಿ ಏನೋ ಒಂದು ಆನಂದ. ಉತ್ತಮ ಕಲಿಕೆ ಉಜ್ವಲ ಭವಿಷ್ಯವೆನ್ನುವ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯದ ಎಲ್ಲೆಡೆ ಶಾಲಾ ಶೈಕ್ಷಣಿಕ ವರ್ಷದ ಆರಂಭಕ್ಕೆ ಜೂನ್ 1 ಮುನ್ನುಡಿ ಬರೆಯಿತು.
ಸಂಭ್ರಮದ ಕಲಿಕೆಗೆ ಸ್ವಾಗತಿಸಿದ ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಮಕ್ಕಳದೇ ಕಲರವ. ಇಲ್ಲಿ ಆಯೋಜಿಸಲಾದ ಬಂಟ್ವಾಳ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ ಮಾತನಾಡಿ, “ಮಕ್ಕಳ ಮನದಲ್ಲಿ ಬಿತ್ತಿದ ಉಜ್ವಲ ಭವಿಷ್ಯದ ಅಕ್ಷರ ಬೀಜಗಳು ಹೆಮ್ಮರವಾಗಿ ನಾಡಿಗೆ ಸಂಪನ್ಮೂಲವಾಗಿ ಬೆಳಕಾಗುವುದರಲ್ಲಿ ಸಂಶಯವಿಲ್ಲ. ಪಠ್ಯ ಹಾಗೂ ಸಹಪಠ್ಯದ ಸಮತೋಲಿತ ಕಲಿಕೆ ಮಕ್ಕಳ ಸಂಸ್ಕಾರಯುತ ನಡೆಗೆ ತೆರೆದು ಪ್ರಜ್ಞಾವಂತ ಸಮಾಜದ ಅನಾವರಣಕ್ಕೆ ಕಾರಣವಾಗುತ್ತದೆ ಎಂದರು. ಇವೆಲ್ಲದಕ್ಕೂ ಕಾರಣವಾಗಿರುವ ಸರಕಾರಿ ಕನ್ನಡ ಶಾಲೆಗಳು ಮುಚ್ಚುವ ಭೀತಿಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಗಮನಾರ್ಹವಾಗಿದೆ. ಶೇಕಡಾ 100 ಫಲಿತಾಂಶದೊಂದಿಗೆ ಶಾಲೆಯ ಶೈಕ್ಷಣಿಕ ಗುಣಮಟ್ಟವು ಜನಮಾನಸದಲ್ಲಿ ಶಾಶ್ವತವಾಗಿದೆ” ಎಂದೂ ಅವರು ಹೇಳಿದ್ದಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ರಮೇಶ್ ರಾವ್ ಪತ್ತುಮುಡಿ, ಡಾ. ಗೋಪಾಲ್ ಆಚಾರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…