ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಸಂಭವಿಸಿದೆ.
ಇಲ್ಲಿನ ನಿವಾಸಿ ಮಧುಸೂಧನ ಅವರು ಮೃತಪಟ್ಟವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಕೊಲೆಗೈದವನಾಗಿದ್ದಾನೆ. ಕೇಶವ ಪೂಜಾರಿ ಅವರ ಮನೆಯಲ್ಲಿ ರವಿವಾರ ರಾತ್ರಿ ದೈವಕ್ಕೆ ತಂಬಿಲ ಕಾರ್ಯಕ್ರಮ ನಡೆಯುತ್ತಿತ್ತು. ರಾಹುಲ್ ಮತ್ತಿತರರು ಮನೆಯಿಂದ ಹೊರಗೆ ಕುಡಿದು ಗದ್ದಲ ಮಾಡುತ್ತಿದ್ದರು. ಇದನ್ನು ಆಕ್ಷೇಪಿಸಿದ ಮಧುಸೂದನ್ ಅವರನ್ನು ರಾಹುಲ್ ಕೋಪದಿಂದ ಬಿಯರ್ ಬಾಟಲ್ನಿಂದ ಕುತ್ತಿಗೆಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಮಧುಸೂದನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ಮೃತರು ಅವಿವಾಹಿತರಾಗಿದ್ದು, ಇಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದರು. ರಾಹುಲ್ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತದೇಹವನ್ನುಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಪುಂಜಾಲಕಟ್ಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪರಿಸರದಲ್ಲಿ ಯುವಕರು ಗಾಂಜಾ ಸೇವಿಸುತ್ತಿದ್ದು, ಅದರ ಪರಿಣಾಮದಿಂದ ಕೊಲೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…