ಮಂಗಳೂರು, ಜೂನ್ 4: ಭಾರತೀಯ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮವನ್ನು ಪ್ರತಿನಿಧಿಸುವ ಸರ್ವೋಚ್ಛ ಸಂಸ್ಥೆಯಾದ National Restaurant Association of India (NRAI)ಯ ಮಂಗಳೂರು ಮತ್ತು ಪಶ್ಚಿಮ ಕರ್ನಾಟಕ ಘಟಕದ ಅಧಿಕೃತ ಉದ್ಘಾಟನಾ ಸಮಾರಂಭವು ಇಂದು ಸಂಜೆ 6 ಗಂಟೆಗೆ ನಗರದ ಹೋಟೆಲ್ ಅವತಾರ್ನಲ್ಲಿ ನಡೆಯಲಿದೆ ಎಂದು ಎನ್.ಆರ್.ಎ.ಐ.ಪ್ರಧಾನ ಕಾರ್ಯದರ್ಶಿ ಪ್ರಕುಲ್ ಕುಮಾರ್ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಆಹಾರ ಸಂಸ್ಕೃತಿಯನ್ನು ಮತ್ತಷ್ಟು ಬಲಪಡಿಸುವುದು, ಆತಿಥ್ಯ ಕ್ಷೇತ್ರದ ಬೆಳವಣಿಗೆಗೆ ಉತ್ತೇಜನ ನೀಡುವುದು ಹಾಗೂ ಕರಾವಳಿ ಕರ್ನಾಟಕವನ್ನು ಪ್ರಮುಖ ಆಹಾರ ಮತ್ತು ಪ್ರವಾಸೋದ್ಯಮ ತಾಣವಾಗಿ ರೂಪಿಸುವ ನಿಟ್ಟಿನಲ್ಲಿ ಈ ಘಟಕದ ಆರಂಭ ಮಹತ್ವದ ಮೈಲುಗಲ್ಲಾಗಲಿದೆ ಎಂದು ಹೇಳಿದರು.
ಕರ್ನಾಟಕದ ಆಹಾರ ಮತ್ತು ಆತಿಥ್ಯ ಕ್ಷೇತ್ರವು ನಿರಂತರ ಬೆಳವಣಿಗೆಯ ಹಾದಿಯಲ್ಲಿದ್ದು, ಜನರ ಪ್ರವಾಸೋದ್ಯಮದತ್ತ ಹೆಚ್ಚುತ್ತಿರುವ ಆಸಕ್ತಿ, ಜೀವನಮಟ್ಟದ ಸುಧಾರಣೆ ಹಾಗೂ ಆದಾಯದ ಏರಿಕೆ ಈ ಕ್ಷೇತ್ರದ ಅಭಿವೃದ್ಧಿಗೆ ಪ್ರಮುಖ ಕಾರಣಗಳಾಗಿವೆ ಎಂದು ಅವರು ತಿಳಿಸಿದರು.
ಮಂಗಳೂರು ಮತ್ತು ಪಶ್ಚಿಮ ಕರ್ನಾಟಕ ಪ್ರದೇಶವು ಇತ್ತೀಚಿನ ವರ್ಷಗಳಲ್ಲಿ ಪ್ರಮುಖ ಆತಿಥ್ಯ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಹೆಚ್ಚುತ್ತಿರುವ ಉಪಹಾರ ಗೃಹಗಳು, ಕೆಫೆಗಳು, ಬಾರ್ಗಳು, ಕ್ಲೌಡ್ ಕಿಚನ್ಗಳು ಹಾಗೂ ಪ್ರವಾಸೋದ್ಯಮಕ್ಕೆ ಪೂರಕವಾದ ವಿವಿಧ ಉದ್ಯಮಗಳ ಬೆಳವಣಿಗೆ ಈ ಪ್ರದೇಶದ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತಿದೆ ಎಂದು ಹೇಳಿದರು.
ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ವಾರ್ಷಿಕವಾಗಿ 11 ಕೋಟಿಗೂ ಅಧಿಕ ದೇಶೀಯ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಇದು ರಾಜ್ಯದ ಒಟ್ಟು ದೇಶೀಯ ಪ್ರವಾಸಿಗರ ಸಂಖ್ಯೆಯ ಶೇ.10 ರಿಂದ 15ರಷ್ಟು ಪಾಲನ್ನು ಹೊಂದಿರುವುದು ವಿಶೇಷವಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಪ್ರಶಾಂತ್ ರಾವ್ ಅರೂರ್, ಡೆನ್ ಡಿಸೋಜ, ಅಶ್ವಿನ್ ರೈ, ಸುಧಾಕರ್ ಪೂಂಜಾ, ಶಿವಪ್ರಸಾದ್ ಶೆಟ್ಟಿ ಹಾಗೂ ವರದ್ ರಾಜ್ ಶೆಣೈ ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…