ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

 

ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ ಮೃತಪಟ್ಟವರು.

ಶ್ರೀ ರಾಜ ರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಕಳೆದ 7-8 ವರ್ಷದಿಂದ ಓಡಾಡಿಕೊಂಡು ಕೂಲಿ ಕೆಲಸ ಮಾಡಿ, ದೇವಸ್ಥಾನದ ವಠಾರದಲ್ಲಿಯೇ ರಾತ್ರಿ ಉಳಿದುಕೊಂಡಿದ್ದ ಡೊಂಬಯ್ಯ ಎಂಬವದು ಇತ್ತೀಚೆಗೆ ಅನಾರೋಗ್ಯದ ಕಾರಣದಿಂದ ದೇವಸ್ಥಾನದ ಅನ್ನಛತ್ರದಲ್ಲಿ ಊಟ ಮಾಡಿಕೊಂಡು, ದೇವಸ್ಥಾನದ ವಠಾರದಲ್ಲಿ ಬಿಕ್ಷೆ ಬೇಡಿ ಜೀವನ ನಡೆಸುತಿದ್ದರು. ಡೊಂಬಯ್ಯ ಜೂನ್ 3ರಂದು ಮದ್ಯಾಹ್ನ ದೇವಸ್ಥಾನದ ವಠಾರದಲ್ಲಿರುವ ಪಂಪ್ ಶೆಡ್ಡಿನಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಮೃತರ ವಾರಸುದಾರರು ಯಾರೆಂದು ಪತ್ತೆಯಾಗದೇ ಇದ್ದು, ಈ ಬಗ್ಗೆ ದೇವಸ್ಥಾನದ ಕಾರ್ಯನಿರ್ವಹಣಾ ಆಧಿಕಾರಿಯಾದ ಪುಟ್ಟಸ್ವಾಮಿ ಗೌಡರವರು ನೀಡಿರುವ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಹೆಸರು ಮತ್ತು ಪ್ರಾಯ ಆಸ್ಪತ್ರೆಯ ಚೀಟಿಯಿಂದ ತಿಳಿದು ಬಂದಿದ್ದು, ವಿಳಾಸ ಪತ್ತೆಯಾಗಿರುವುದಿಲ್ಲ. ಪ್ರಸ್ತುತ ಮೃತದೇಹವನ್ನು ಮೃತರ ವಾರಿಸುದಾರರ ಪತ್ತೆಯ ಬಗ್ಗೆ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮೃತರ ವಾರಿಸುದಾರರು ಪತ್ತೆಯಾದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಸಂಪರ್ಕಿಸುವAತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!