ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

 

ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ ಮೃತಪಟ್ಟವರು.

ಶ್ರೀ ರಾಜ ರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಕಳೆದ 7-8 ವರ್ಷದಿಂದ ಓಡಾಡಿಕೊಂಡು ಕೂಲಿ ಕೆಲಸ ಮಾಡಿ, ದೇವಸ್ಥಾನದ ವಠಾರದಲ್ಲಿಯೇ ರಾತ್ರಿ ಉಳಿದುಕೊಂಡಿದ್ದ ಡೊಂಬಯ್ಯ ಎಂಬವದು ಇತ್ತೀಚೆಗೆ ಅನಾರೋಗ್ಯದ ಕಾರಣದಿಂದ ದೇವಸ್ಥಾನದ ಅನ್ನಛತ್ರದಲ್ಲಿ ಊಟ ಮಾಡಿಕೊಂಡು, ದೇವಸ್ಥಾನದ ವಠಾರದಲ್ಲಿ ಬಿಕ್ಷೆ ಬೇಡಿ ಜೀವನ ನಡೆಸುತಿದ್ದರು. ಡೊಂಬಯ್ಯ ಜೂನ್ 3ರಂದು ಮದ್ಯಾಹ್ನ ದೇವಸ್ಥಾನದ ವಠಾರದಲ್ಲಿರುವ ಪಂಪ್ ಶೆಡ್ಡಿನಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಮೃತರ ವಾರಸುದಾರರು ಯಾರೆಂದು ಪತ್ತೆಯಾಗದೇ ಇದ್ದು, ಈ ಬಗ್ಗೆ ದೇವಸ್ಥಾನದ ಕಾರ್ಯನಿರ್ವಹಣಾ ಆಧಿಕಾರಿಯಾದ ಪುಟ್ಟಸ್ವಾಮಿ ಗೌಡರವರು ನೀಡಿರುವ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಹೆಸರು ಮತ್ತು ಪ್ರಾಯ ಆಸ್ಪತ್ರೆಯ ಚೀಟಿಯಿಂದ ತಿಳಿದು ಬಂದಿದ್ದು, ವಿಳಾಸ ಪತ್ತೆಯಾಗಿರುವುದಿಲ್ಲ. ಪ್ರಸ್ತುತ ಮೃತದೇಹವನ್ನು ಮೃತರ ವಾರಿಸುದಾರರ ಪತ್ತೆಯ ಬಗ್ಗೆ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮೃತರ ವಾರಿಸುದಾರರು ಪತ್ತೆಯಾದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಸಂಪರ್ಕಿಸುವAತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಭೇಟಿಯಾದ ಸಂತೋಷ್ ಪೈ…!

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

ಮಂಗಳೂರಿನಲ್ಲಿ NRAI ಅಧ್ಯಾಯಕ್ಕೆ ಚಾಲನೆ…!

error: Content is protected !!