ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ ಮೃತಪಟ್ಟವರು.
ಶ್ರೀ ರಾಜ ರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಕಳೆದ 7-8 ವರ್ಷದಿಂದ ಓಡಾಡಿಕೊಂಡು ಕೂಲಿ ಕೆಲಸ ಮಾಡಿ, ದೇವಸ್ಥಾನದ ವಠಾರದಲ್ಲಿಯೇ ರಾತ್ರಿ ಉಳಿದುಕೊಂಡಿದ್ದ ಡೊಂಬಯ್ಯ ಎಂಬವದು ಇತ್ತೀಚೆಗೆ ಅನಾರೋಗ್ಯದ ಕಾರಣದಿಂದ ದೇವಸ್ಥಾನದ ಅನ್ನಛತ್ರದಲ್ಲಿ ಊಟ ಮಾಡಿಕೊಂಡು, ದೇವಸ್ಥಾನದ ವಠಾರದಲ್ಲಿ ಬಿಕ್ಷೆ ಬೇಡಿ ಜೀವನ ನಡೆಸುತಿದ್ದರು. ಡೊಂಬಯ್ಯ ಜೂನ್ 3ರಂದು ಮದ್ಯಾಹ್ನ ದೇವಸ್ಥಾನದ ವಠಾರದಲ್ಲಿರುವ ಪಂಪ್ ಶೆಡ್ಡಿನಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಮೃತರ ವಾರಸುದಾರರು ಯಾರೆಂದು ಪತ್ತೆಯಾಗದೇ ಇದ್ದು, ಈ ಬಗ್ಗೆ ದೇವಸ್ಥಾನದ ಕಾರ್ಯನಿರ್ವಹಣಾ ಆಧಿಕಾರಿಯಾದ ಪುಟ್ಟಸ್ವಾಮಿ ಗೌಡರವರು ನೀಡಿರುವ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಹೆಸರು ಮತ್ತು ಪ್ರಾಯ ಆಸ್ಪತ್ರೆಯ ಚೀಟಿಯಿಂದ ತಿಳಿದು ಬಂದಿದ್ದು, ವಿಳಾಸ ಪತ್ತೆಯಾಗಿರುವುದಿಲ್ಲ. ಪ್ರಸ್ತುತ ಮೃತದೇಹವನ್ನು ಮೃತರ ವಾರಿಸುದಾರರ ಪತ್ತೆಯ ಬಗ್ಗೆ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮೃತರ ವಾರಿಸುದಾರರು ಪತ್ತೆಯಾದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಸಂಪರ್ಕಿಸುವAತೆ ಸೂಚಿಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…