ಕರಾವಳಿ

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ.

ಅವರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು ರೂ.16,40,000 ಎಂದು ಅಂದಾಜಿಸಲಾಗಿದೆ. ಬೆಂಗಳೂರು ನಗರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ರೂ.10,40,000 ಮೌಲ್ಯದ 104 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಣಾಮ್ ಕೋಟ್ಯಾನ್ ಎಂಬಾತನ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ಹಲ್ಲೆ ಹಾಗೂ ಬೆದರಿಕೆ ಪ್ರಕರಣ, 2026ರಲ್ಲಿ ಮಾದಕವಸ್ತು ಸೇವನೆ ಪ್ರಕರಣ, 2022ರಲ್ಲಿ ಅಬಕಾರಿ ಇಲಾಖೆಯಲ್ಲಿ ಗಾಂಜಾ ಸಂಬಂಧಿತ ಪ್ರಕರಣ ಹಾಗೂ 2022ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ದಾಖಲಾಗಿವೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಪ್ರತಿವರ್ಷ ಆಯೋಜಿಸಲಾಗುವ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ…

3 hours ago

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು,…

3 hours ago

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

  ಛಾವಣಿಯ ಶೀಟ್‌ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ…

1 day ago

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

  ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಒಂದು ಕ್ಯಾಂಟರ್‌ಗೆ ಢಿಕ್ಕಿ ಹೊಡೆದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಆಂಬುಲೆನ್ಸ್…

1 day ago

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

  ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ ಮೃತಪಟ್ಟವರು.…

1 day ago

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಪಶ್ಚಿಮ ಬಂಗಾಳ ಮೂಲದ 21 ವರ್ಷದ ಹಸೀನಾ ಖತೂನ್ ಎಂಬುವವರು ಜೋಕಟ್ಟೆ ಹಳೇ ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದು,…

1 day ago