ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್ ಎಂಬ ಧ್ಯೇಯವಾಕ್ಯದೊಂದಿಗೆ ಮೇರಾ ಯುವ ಭಾರತ, ದಕ್ಷಿಣ ಕನ್ನಡ ವತಿಯಿಂದ ಭವ್ಯ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾವನ್ನು ಆಯೋಜಿಸಲಾಯಿತು.
ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮೇರಾ ಯುವ ಭಾರತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ವಿಶ್ವವಿದ್ಯಾಲಯದ ಎನ್ಎಸ್ಎಸ್, ಮಂಗಳೂರು ಸೈಕ್ಲಿಂಗ್ ಕ್ಲಬ್, ಸುರತ್ಕಲ್ ಬೀಚ್ ರನ್ನರ್ಸ್, ಫ್ರೀಜಿಂಗ್ ಸನ್ ಹಾಗೂ ವಿ.ಆರ್. ಸೈಕ್ಲಿಂಗ್ ಕ್ಲಬ್ಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.
ನಗರದ ಮಂಗಳಾ ಕ್ರೀಡಾಂಗಣದಿಂದ ಜಾಥಾಕ್ಕೆ ಚಾಲನೆ ನೀಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ಆರೋಗ್ಯಕರ ಜೀವನಶೈಲಿ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸೈಕ್ಲಿಂಗ್ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೇರಾ ಯುವ ಭಾರತ ಉಪನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ. ಮಾತನಾಡಿ, ಯುವಜನರು ಆರೋಗ್ಯ ಹಾಗೂ ರಾಷ್ಟ್ರ ನಿರ್ಮಾಣದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಜಾಥಾದಲ್ಲಿ ಮಕ್ಕಳು, ಯುವಕರು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಸೇರಿದಂತೆ ನೂರಾರು ಮಂದಿ ಭಾಗವಹಿಸಿ ಫಿಟ್ ಇಂಡಿಯಾ ಅಭಿಯಾನ ಮತ್ತು ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು. ಮಂಗಳಾ ಕ್ರೀಡಾಂಗಣದಿಂದ ಆರಂಭವಾದ ಜಾಥಾ ಕಾರ್ಸ್ಟ್ರೀಟ್, ಕ್ಲಾಕ್ ಟವರ್, ಪಿವಿಎಸ್ ಸರ್ಕಲ್, ಲಾಲ್ಬಾಗ್ ಹಾಗೂ ಲೇಡಿಹಿಲ್ ಮಾರ್ಗವಾಗಿ ಸಂಚರಿಸಿ ಮತ್ತೆ ಮಂಗಳಾ ಕ್ರೀಡಾಂಗಣದಲ್ಲಿ ಸಮಾರೋಪಗೊಂಡಿತು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜಕ ಶೇಷಪ್ಪ ಅಮೀನ್, ಚಿತ್ತರಂಜನ್ ಬೋಳಾರ್, ಚಲನಚಿತ್ರ ನಟ ದಿನೇಶ್ ಅತ್ತಾವರ, ಅನಿಲ್ ಶೆಟ್, ಹಾರ್ದಿಕ್ ರೈ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…