ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರನ್ನಾಗಿ ರಾಜ್ಯ ಸರ್ಕಾರ ಸೋಮವಾರ ನೇಮಕ ಮಾಡಿದೆ.
ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಹುದ್ದೆಗೆ ಸಂಪುಟ ಸಚಿವರ ಸ್ಥಾನಮಾನ ನೀಡಲಾಗಿದ್ದು, ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜಕೀಯ ದತ್ತಾಂಶ ಮತ್ತು ಚುನಾವಣಾ ವಿಶ್ಲೇಷಣಾ ಸಂಸ್ಥೆಯ ಮುಖ್ಯಸ್ಥರಾಗಿರುವ ಸುನೀಲ್ ಕನುಗೋಲು, ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರಿಕೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷದ ಪರ ಚುನಾವಣಾ ತಂತ್ರ ರೂಪಿಸುವಲ್ಲಿ ಅವರು ಮಹತ್ವದ ಕೊಡುಗೆ ನೀಡಿದ್ದರು. ಅದಕ್ಕೂ ಮುನ್ನ 2023ರಲ್ಲಿ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ತಂತ್ರಗಾರಿಕೆಯಲ್ಲಿ ಮಾರ್ಗದರ್ಶನ ನೀಡಿದ್ದರು. ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ, ಕನುಗೋಲು ಅವರ ರಾಜಕೀಯ ವಿಶ್ಲೇಷಣೆ ಮತ್ತು ಚುನಾವಣಾ ತಂತ್ರಗಾರಿಕೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೂ ಸುನೀಲ್ ಕನುಗೋಲು ಮುಖ್ಯ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲೂ ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದ್ದು, ರಾಜ್ಯ ಆಡಳಿತ ಮತ್ತು ರಾಜಕೀಯ ತಂತ್ರ ರೂಪಿಸುವಲ್ಲಿ ಅವರ ಪಾತ್ರ ಮತ್ತಷ್ಟು ಪ್ರಮುಖವಾಗುವ ನಿರೀಕ್ಷೆ ಇದೆ.
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…