ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಅ.ಕ್ರ: 38/2026 ಪ್ರಕರಣದ ತನಿಖೆ ನಡೆಸಲಾಗಿ ದಿನಾಂಕ: 15-05-2026 ರಂದು ಆರೋಪಿ ಬಂಟ್ವಾಳ ಕೊಳ್ನಾಡು ನಿವಾಸಿ ಹಮೀದ್ ( ಹಾಲಿ ವಾಸ: ಕಾಸರಗೋಡು) ಎಂಬಾತನನ್ನು ವಶಕ್ಕೆ ಪಡೆದ ತನಿಖಾ ತಂಡ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿ, ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.
ಸದ್ರಿ ಆರೋಪಿಯ ವಿಚಾರಣೆಯ ವೇಳೆ ನೀಡಿದ ಮಾಹಿತಿಯ ಅಧಾರದಲ್ಲಿ ದಿನಾಂಕ: 07-06-2026 ರಂದು ಮತ್ತೋರ್ವ ಆರೋಪಿ ಬಂಟ್ವಾಳ ಕೊಳ್ನಾಡು ನಿವಾಸಿ (ಹಾಲಿ ವಾಸ: ಕಾಸರಗೋಡು) ಜಾಬೀರ್ ಜಾಬೀ (38) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಪುಂಜಾಲಕಟ್ಟೆ ಠಾಣಾ ಅ.ಕ್ರ: 38/2026 ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ ರೂ 2,00,000/- ನಗದು ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ: 28/2025 ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಸದ್ರಿ ಸೊತ್ತುಗಳ ಒಟ್ಟು ಮೌಲ್ಯ ರೂ 23,67,000/- ಗಳಾಗಿರುತ್ತದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಸದ್ರಿ ಪ್ರಕರಣಗಳನ್ನು ಹೊರತುಪಡಿಸಿದಂತೆ ಆರೋಪಿಗಳು ಉಪ್ಪಿನಂಗಡಿ ಠಾಣೆ, ಬಂಟ್ವಾಳ ನಗರ ಠಾಣೆ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 05 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದ್ದು ತನಿಖೆ ಮುಂದುವರಿಯುತ್ತದೆ.
ಈ ಪ್ರಕರಣದ ಪತ್ತೆಕಾರ್ಯದಲ್ಲಿ ಬೆಳ್ತಂಗಡಿ ಉಪವಿಭಾಗಾಧೀಕ್ಷಕರಾದ ಶ್ರೀಮತಿ ರೋಹಿಸಿ ಸಿ.ಕೆ ರವರ ನೇತ್ರತ್ವದಲ್ಲಿ, ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್, ಉಪ್ಪಿನಂಗಡಿ ಗ್ರಾಮಾಂತರ ಸಿ.ಪಿ.ಐ ನಾಗರಾಜ್ ಹೆಚ್.ಇ, ಪುಂಜಾಲಕಟ್ಟೆ ಠಾಣಾ ಪಿ.ಎಸ್.ಐ ರಾಜೇಶ್ ಕೆ.ವಿ, ಸಿಬ್ಬಂದಿಗಳಾದ ಏ.ಎಸ್.ಐ ಬೆನ್ನಿಚ್ಚನ್, ಏ.ಎಸ್.ಐ ಸುಂದರ ಶೆಟ್ಟಿ, ಏ.ಎಸ್.ಐ ವಿಶ್ವನಾಥ್ ನಾಯ್ಕ್, ಪ್ರವೀಣ್ ಮೂರುಗೋಳಿ, ರಾಜೇಶ್ ಎನ್, ವಿಜಯ್ ಕುಮಾರ್ ರೈ, ರಾಹುಲ್ ರಾವ್, ಸಂತೋಷ್, ಬಸವರಾಜ್, ರಜಿತ್, ನಾಗರಾಜ್ ರವರು ಭಾಗಿಯಾಗಿದ್ದು, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ರವರು ಸಹಕರಿಸಿರುತ್ತಾರೆ.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ಎಂಬ ಯುವತಿ ಜೂನ್ 7ರಂದು ಮನೆಯಿಂದ…