ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ.

ಮೃತರನ್ನು ಕೋಟೇಶ್ವರ ಮಾರ್ಕೋಡು ನಿವಾಸಿ ಪ್ರದೀಪ್ ಪೂಜಾರಿ (35) ಎಂದು ಗುರುತಿಸಲಾಗಿದೆ. ಅವರು ಗಾರೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಬಂದಿದ್ದ ಬೃಹತ್ ಕಂಟೇನರ್ ಲಾರಿಯೊಂದು ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಡರ್‌ಪಾಸ್ ಬಳಿ ಯು-ಟರ್ನ್ ಪಡೆಯಲು ಮುಂದಕ್ಕೆ ಸಾಗುತ್ತಿದ್ದ ವೇಳೆ, ಪೇಟೆ ಕಡೆಯಿಂದ ಹಾಲಾಡಿ ರಸ್ತೆಗೆ ತೆರಳುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿಯ ಪರಿಣಾಮ ಬೈಕ್ ಸಹಿತ ಕೆಳಗೆ ಬಿದ್ದ ಪ್ರದೀಪ್ ಪೂಜಾರಿ ಅವರ ಮೇಲೆ ಲಾರಿ ಹರಿದ ಪರಿಣಾಮ ಗಂಭೀರ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕುಂದಾಪುರ ಸಂಚಾರಿ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಅನೂಪ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!