ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವಕ್ತಾರ ಮುಸ್ತಾಕ್ ಹೆನ್ನಾಬೈಲು ಆಗ್ರಹಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಕಸಾಯಿಖಾನೆಗಳನ್ನು ಮುಚ್ಚಿ, ಗೋಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಗೋಹತ್ಯೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರನ್ನು ದಾರಿತಪ್ಪಿಸುತ್ತಿದೆ ಎಂದು ಆರೋಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ವಿಷಯದಲ್ಲಿ ಹೆಚ್ಚಿನ ಪ್ರಚಾರ ನಡೆಯುತ್ತಿದೆಯೇ ಹೊರತು, ಗೋಹತ್ಯೆ ನಿಷೇಧಿಸಲು ಅಗತ್ಯ ಕ್ರಮಗಳು ಕೈಗೊಳ್ಳಲಾಗಿಲ್ಲ ಎಂದು ಟೀಕಿಸಿದರು. ಬಿಜೆಪಿ ಆಡಳಿತವಿರುವ ಕೆಲವು ರಾಜ್ಯಗಳಿಂದಲೂ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು. ಕೇಂದ್ರ ಸರ್ಕಾರ ದೇಶವ್ಯಾಪಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದು, ಗೋ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಈ ಕುರಿತು ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಸಂವಿಧಾನಾತ್ಮಕ ಹಕ್ಕುಗಳ ಅಡಿಯಲ್ಲಿ ಶಾಂತಿಯುತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪ್ರಮುಖರಾದ ಅಬ್ದುಲ್ ಹಫೀಝ್ ಖಾಸಿಮಿ, ಝಾಕೀರ್ ಹುಸೈನ್ ಉಚ್ಚಿಲ, ಇಬ್ರಾಹಿಂ ನಡುಪದವು ಹಾಗೂ ಕೋಟ ಇಬ್ರಾಹಿಂ ಸಾಹೇಬ್ ಉಪಸ್ಥಿತರಿದ್ದರು.
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…