ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ.
ಜೂಜಾಟ ನಡೆಯುತ್ತಿರುವ ಕುರಿತು ದೊರೆತ ಮಾಹಿತಿಯ ಮೇರೆಗೆ ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಸಂದೀಪ್ ಜಿ.ಎಸ್. ನೇತೃತ್ವದ ತಂಡ ದಾಳಿ ನಡೆಸಿತು. ಈ ವೇಳೆ ಚಪ್ಪರ ಹಾಗೂ ಟಾರ್ಪಾಲ್ ಅಡಿ ಟೇಬಲ್ ಸುತ್ತ ಕುಳಿತು ಹಣ ಪಣಕ್ಕೊಡ್ಡಿ ‘ಅಂದರ್-ಬಾಹರ್’ ಜೂಜಾಟ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ದಾಳಿಯಲ್ಲಿ ವಿಜೇಶ್ ಕುಮಾರ್ (40), ದಸ್ತಗೀರ್ (33) ಹಾಗೂ ರೋಹಿತ್ (34) ಅವರನ್ನು ಸ್ಥಳದಲ್ಲೇ ಬಂಧಿಸಲಾಯಿತು. ಜೂಜಾಟಕ್ಕೆ ಬಳಸಿದ್ದ ರೂ.23,970 ನಗದು, ರೂ.35 ಸಾವಿರ ಮೌಲ್ಯದ ಐದು ಮೊಬೈಲ್ ಫೋನ್ಗಳು, ಇಸ್ಪೀಟ್ ಕಾರ್ಡ್ಗಳು, ಟೇಬಲ್, ಕುರ್ಚಿಗಳು, ಬ್ಯಾಟರಿ ಹಾಗೂ ವಿದ್ಯುತ್ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ಜೂಜಾಟಕ್ಕೆ ಆಗಮಿಸಲು ಬಳಸಿದ್ದ ಮೂರು ಕಾರುಗಳು, ಎರಡು ಮೋಟಾರ್ಸೈಕಲ್ಗಳು ಹಾಗೂ ಒಂದು ಸ್ಕೂಟರ್ನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ರೂ.13.07 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ದಾಳಿ ವೇಳೆ ಪರಾರಿಯಾಗಿದ್ದ ವಿಜಯ (39), ಮಹೇಶ್ (26), ಕಿಶೋರ್ ಕುಮಾರ್ (46) ಹಾಗೂ ಸಂತೋಷ್ ಆಚಾರ್ಯ (35) ಅವರನ್ನು ಬಳಿಕ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ಎಂಬ ಯುವತಿ ಜೂನ್ 7ರಂದು ಮನೆಯಿಂದ…