ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ.
ಜೂಜಾಟ ನಡೆಯುತ್ತಿರುವ ಕುರಿತು ದೊರೆತ ಮಾಹಿತಿಯ ಮೇರೆಗೆ ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಸಂದೀಪ್ ಜಿ.ಎಸ್. ನೇತೃತ್ವದ ತಂಡ ದಾಳಿ ನಡೆಸಿತು. ಈ ವೇಳೆ ಚಪ್ಪರ ಹಾಗೂ ಟಾರ್ಪಾಲ್ ಅಡಿ ಟೇಬಲ್ ಸುತ್ತ ಕುಳಿತು ಹಣ ಪಣಕ್ಕೊಡ್ಡಿ ‘ಅಂದರ್-ಬಾಹರ್’ ಜೂಜಾಟ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ದಾಳಿಯಲ್ಲಿ ವಿಜೇಶ್ ಕುಮಾರ್ (40), ದಸ್ತಗೀರ್ (33) ಹಾಗೂ ರೋಹಿತ್ (34) ಅವರನ್ನು ಸ್ಥಳದಲ್ಲೇ ಬಂಧಿಸಲಾಯಿತು. ಜೂಜಾಟಕ್ಕೆ ಬಳಸಿದ್ದ ರೂ.23,970 ನಗದು, ರೂ.35 ಸಾವಿರ ಮೌಲ್ಯದ ಐದು ಮೊಬೈಲ್ ಫೋನ್ಗಳು, ಇಸ್ಪೀಟ್ ಕಾರ್ಡ್ಗಳು, ಟೇಬಲ್, ಕುರ್ಚಿಗಳು, ಬ್ಯಾಟರಿ ಹಾಗೂ ವಿದ್ಯುತ್ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ಜೂಜಾಟಕ್ಕೆ ಆಗಮಿಸಲು ಬಳಸಿದ್ದ ಮೂರು ಕಾರುಗಳು, ಎರಡು ಮೋಟಾರ್ಸೈಕಲ್ಗಳು ಹಾಗೂ ಒಂದು ಸ್ಕೂಟರ್ನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ರೂ.13.07 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ದಾಳಿ ವೇಳೆ ಪರಾರಿಯಾಗಿದ್ದ ವಿಜಯ (39), ಮಹೇಶ್ (26), ಕಿಶೋರ್ ಕುಮಾರ್ (46) ಹಾಗೂ ಸಂತೋಷ್ ಆಚಾರ್ಯ (35) ಅವರನ್ನು ಬಳಿಕ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…