ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಅದರ್ಶ್ ನೇತ್ರತ್ವದಲ್ಲಿ ಟ್ರಾಫಿಕ್ ಪೋಲೀಸರ ತಂಡ ಪರಿಶೀಲನೆ ನಡೆಸಿವೆ.
ಬೆಳಿಗ್ಗೆ 6 ಗಂಟೆಯಿಂದಲೇ ಸ್ವತಃ ಟ್ರಾಫಿಕ್ ಎಸ್.ಐ. ಆದರ್ಶ್ ಅವರೇ ಫೀಲ್ಡಿಗಿಳಿದು ಶಾಲಾ ಬಸ್ಗಳನು ಬಿಸಿರೋಡಿನ ಸರ್ಕಲ್ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಪ್ರತಿಯೊಂದು ಬಸ್ಗಳ ದಾಖಲೆ ಸಹಿತ ಇತರ ನಿಯಮಗಳನ್ನು ಅನುಸರಿಸುತ್ತಿದ್ದಾರೆಯೇ ಎಂಬುದನ್ನು ಖಾತರಿ ಪಡಿಸಿಕೊಂಡರು. ಕಾನೂನು ಪಾಲಿಸದ ಚಾಲಕರಿಗೆ ಹಾಗೂ ನಿಯಮಾನುಸಾರ ಇಲ್ಲದಿರುವ ಬಸ್ಗಳಿಗೆ ಕೇಸು ಹಾಕಿ ಎಚ್ಚರಿಕೆ ನೀಡಿದ್ದಾರೆ. ಸುಮಾರು 20 ಪ್ರಕರಣಗಳು ಒಂದೇ ದಿನದಲ್ಲಿ ದಾಖಲು ಮಾಡಿದ್ದಾರೆ.
ಅದರಲ್ಲಿ ಯೂನಿಫಾರ್ಮ್ ಹಾಕದೆ ವಾಹನ ಚಲಾಯಿಸುವ ಆರು ಚಾಲಕರು, ಆರ್.ಟಿ.ಒ.ಇಲಾಖೆ ನಿಗದಿಪಡಿಸಿದ ಸೀಟುಗಳನ್ನು ಹೊರತುಪಡಿಸಿ, ಹೆಚ್ಚುವರಿಯಾಗಿ ಮಕ್ಕಳನ್ನು ಬಸ್ಗಳಲ್ಲಿ ತುಂಬಿಸಿಕೊಂಡು ಹೋಗುವ ನಾಲ್ಕು ಶಾಲಾ ಬಸ್ಗಳಿಗೆ, ವಾಹನದ ಪಿಟ್ನೆಸ್ ಪ್ರಮಾಣ ಪತ್ರದ ಅವಧಿ ಮುಗಿದ ಒಂದು ಬಸ್ ಹಾಗೂ ದಾಖಲೆಗಳಿಲ್ಲದೆ ವಾಹನಗಳಿಗೆ ಕೇಸು ದಾಖಲು ಮಾಡಿದ್ದಾರೆ. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ವಾಹನಗಳಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇಲಾಖೆಯ ನಿಯಮಗಳನ್ನು ಅಗತ್ಯವಾಗಿ ಪಾಲಿಸಬೇಕಿದೆ. ಮಳೆಗಾಲದಲ್ಲಿ ಜಾಗರೂಕತೆಯಿಂದ ವಾಹನ ಚಲಾಯಿಸಬೇಕು, ಚಾಲಕರು ಮುಂಜಾಗ್ರತಾ ಕ್ರಮವನ್ನು ಅನುಸರಿಸಲೇ ಬೇಕು. ಒಂದು ವೇಳೆ ಕಾನೂನು ಮೀರಿ ನಿಯಮಗಳನ್ನು ಪಾಲಿಸದೇ ವಾಹನ ಚಲಾಯಿಸುವ ಸ್ಕೂಲ್ ಬಸ್ ಹಾಗೂ ಚಾಲಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಟ್ರಾಫಿಕ್ ಎಸ್.ಐ.ಅದರ್ಶ್ ತಿಳಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…