ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಅದರ್ಶ್ ನೇತ್ರತ್ವದಲ್ಲಿ ಟ್ರಾಫಿಕ್ ಪೋಲೀಸರ ತಂಡ ಪರಿಶೀಲನೆ ನಡೆಸಿವೆ.
ಬೆಳಿಗ್ಗೆ 6 ಗಂಟೆಯಿಂದಲೇ ಸ್ವತಃ ಟ್ರಾಫಿಕ್ ಎಸ್.ಐ. ಆದರ್ಶ್ ಅವರೇ ಫೀಲ್ಡಿಗಿಳಿದು ಶಾಲಾ ಬಸ್ಗಳನು ಬಿಸಿರೋಡಿನ ಸರ್ಕಲ್ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಪ್ರತಿಯೊಂದು ಬಸ್ಗಳ ದಾಖಲೆ ಸಹಿತ ಇತರ ನಿಯಮಗಳನ್ನು ಅನುಸರಿಸುತ್ತಿದ್ದಾರೆಯೇ ಎಂಬುದನ್ನು ಖಾತರಿ ಪಡಿಸಿಕೊಂಡರು. ಕಾನೂನು ಪಾಲಿಸದ ಚಾಲಕರಿಗೆ ಹಾಗೂ ನಿಯಮಾನುಸಾರ ಇಲ್ಲದಿರುವ ಬಸ್ಗಳಿಗೆ ಕೇಸು ಹಾಕಿ ಎಚ್ಚರಿಕೆ ನೀಡಿದ್ದಾರೆ. ಸುಮಾರು 20 ಪ್ರಕರಣಗಳು ಒಂದೇ ದಿನದಲ್ಲಿ ದಾಖಲು ಮಾಡಿದ್ದಾರೆ.
ಅದರಲ್ಲಿ ಯೂನಿಫಾರ್ಮ್ ಹಾಕದೆ ವಾಹನ ಚಲಾಯಿಸುವ ಆರು ಚಾಲಕರು, ಆರ್.ಟಿ.ಒ.ಇಲಾಖೆ ನಿಗದಿಪಡಿಸಿದ ಸೀಟುಗಳನ್ನು ಹೊರತುಪಡಿಸಿ, ಹೆಚ್ಚುವರಿಯಾಗಿ ಮಕ್ಕಳನ್ನು ಬಸ್ಗಳಲ್ಲಿ ತುಂಬಿಸಿಕೊಂಡು ಹೋಗುವ ನಾಲ್ಕು ಶಾಲಾ ಬಸ್ಗಳಿಗೆ, ವಾಹನದ ಪಿಟ್ನೆಸ್ ಪ್ರಮಾಣ ಪತ್ರದ ಅವಧಿ ಮುಗಿದ ಒಂದು ಬಸ್ ಹಾಗೂ ದಾಖಲೆಗಳಿಲ್ಲದೆ ವಾಹನಗಳಿಗೆ ಕೇಸು ದಾಖಲು ಮಾಡಿದ್ದಾರೆ. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ವಾಹನಗಳಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇಲಾಖೆಯ ನಿಯಮಗಳನ್ನು ಅಗತ್ಯವಾಗಿ ಪಾಲಿಸಬೇಕಿದೆ. ಮಳೆಗಾಲದಲ್ಲಿ ಜಾಗರೂಕತೆಯಿಂದ ವಾಹನ ಚಲಾಯಿಸಬೇಕು, ಚಾಲಕರು ಮುಂಜಾಗ್ರತಾ ಕ್ರಮವನ್ನು ಅನುಸರಿಸಲೇ ಬೇಕು. ಒಂದು ವೇಳೆ ಕಾನೂನು ಮೀರಿ ನಿಯಮಗಳನ್ನು ಪಾಲಿಸದೇ ವಾಹನ ಚಲಾಯಿಸುವ ಸ್ಕೂಲ್ ಬಸ್ ಹಾಗೂ ಚಾಲಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಟ್ರಾಫಿಕ್ ಎಸ್.ಐ.ಅದರ್ಶ್ ತಿಳಿಸಿದ್ದಾರೆ.
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…