ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ಮೂಡುಬಿದಿರೆ ತಾಲೂಕಿನ ಸಂಪಿಗೆ ಗ್ರಾಮದ ಪುಲುಕುಳದಲ್ಲಿ ನಡೆದಿದೆ.
ಈ ಸಂಬಂಧ ಪುಲುಕುಳ ನಿವಾಸಿ ಆಲ್ವಿನ್ ಸಾಂಕ್ತಿಸ್ ವಿರುದ್ಧ ಮೂಡಬಿದಿರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆರೆಮನೆಯ ನಿವಾಸಿ ನವೀನ್ ಸಾಂಕ್ತಿಸ್ ಅವರು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ, ತಮ್ಮ ದನಗಳು ಆರೋಪಿಯ ತೋಟಕ್ಕೆ ಹೋಗಿದ್ದ ವಿಚಾರಕ್ಕೆ ಕೋಪಗೊಂಡ ಆಲ್ವಿನ್ ಸಾಂತಿಸ್, ಮನೆಯ ಬಳಿ ಕಟ್ಟಿಹಾಕಿದ್ದ ಎರಡು ದನಗಳ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ. ಗಾಯಗೊಂಡ ಎರಡೂ ದನಗಳು ಗರ್ಭಿಣಿ ದನಗಳಾಗಿದ್ದು, ದನಗಳ ಹೊಟ್ಟೆಯ ಭಾಗಕ್ಕೆ ದಂಟೆಯಿಂದ ಹೊಡೆದ ಪರಿಣಾಮ ಗರ್ಭದಲ್ಲಿದ್ದ ಕರುಗಳಿಗೂ ಗಾಯಗಳಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಘಟನೆ ಕುರಿತು ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…