ರಾಜ್ಯ

ತಿರುವನಂತಪುರ : ಕೇರಳದಲ್ಲಿ ಮತ್ತೆ ನಿಫಾ ಆತಂಕ…!

 

ಕೇರಳದಲ್ಲಿ ಮತ್ತೊಮ್ಮೆ ನಿಫಾ ವೈರಸ್ ಆತಂಕ ಸೃಷ್ಟಿಯಾಗಿದ್ದು, ಕೋಯಿಕ್ಕೋಡ್ ಜಿಲ್ಲೆಯ 43 ವರ್ಷದ ವ್ಯಕ್ತಿಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದೆ.

ಪ್ರಾಥಮಿಕ ಪರೀಕ್ಷೆಯಲ್ಲಿ ನಿಫಾ ಸೋಂಕಿನ ಲಕ್ಷಣಗಳು ಕಂಡುಬ0ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದ್ದು, ಅಂತಿಮ ದೃಢೀಕರಣಕ್ಕಾಗಿ ರೋಗಿಯ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಅಂತಿಮ ವರದಿ ಶೀಘ್ರದಲ್ಲೇ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಉದ್ಯಮಿಯಾಗಿರುವ ರೋಗಿ ಮೊದಲಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ರೋಗಿಯ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಪ್ರತ್ಯೇಕಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಆರಂಭಿಸಿದೆ. ಆರೋಗ್ಯ ಸಿಬ್ಬಂದಿ ಸೇರಿದಂತೆ ನಿಕಟ ಸಂಪರ್ಕದಲ್ಲಿದ್ದವರಿಗೆ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಶಾಲೆ-ಅಂಗನವಾಡಿಗಳ ನೀರು ಪರೀಕ್ಷೆ ಕಡ್ಡಾಯ…!

  ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು…

1 hour ago

ಬಿಸಿರೋಡ್ : ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ…!

  ಗ್ಯಾಸ್ ಸಿಲಿಂಡರ್‌ಗಳ ನಿರಂತರ ಬೆಲೆ ಏರಿಕೆ ಹಾಗೂ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ, ವಿಮೆನ್ ಇಂಡಿಯಾ ಮೂವ್‌ಮೆಂಟ್…

2 hours ago

ಬಂಟ್ವಾಳ : ಕಳೆದುಹೋದ 8 ಪವನ್ ಚಿನ್ನ ಮರಳಿಸಿದ ಕಂಡಕ್ಟರ್…!

  ಬಸ್‌ನಲ್ಲಿ ಕಳೆದುಕೊಂಡಿದ್ದ 8 ಪವನ್ ಚಿನ್ನಾಭರಣವನ್ನು ಸಂಬ0ಧಪಟ್ಟವರಿಗೆ ಬಸ್ ಕಂಡಕ್ಟರ್ ಮರಳಿಸಿದ ಮಾನವೀಯ ಘಟನೆ ಇತ್ತೀಚೆಗೆ ನಡೆದಿದೆ. ಬಿ.ಸಿ…

3 hours ago

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…

21 hours ago

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…

21 hours ago

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…

1 day ago