ಗ್ಯಾಸ್ ಸಿಲಿಂಡರ್ಗಳ ನಿರಂತರ ಬೆಲೆ ಏರಿಕೆ ಹಾಗೂ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ, ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಬಿಸಿರೋಡ್ ಫ್ಲೈಓವರ್ ಕೆಳಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.
ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿ, ಗೃಹಬಳಕೆಯ ಗ್ಯಾಸ್ ದರವನ್ನು ಕಡಿಮೆಗೊಳಿಸುವಂತೆ ಹಾಗೂ ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ಸಿಲಿಂಡರ್ ವಿತರಣೆ ಮಾಡುವಂತೆ ಆಗ್ರಹಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಂ ಮಾತನಾಡಿ ,
ಕೇಂದ್ರ ಬಿಜೆಪಿ ಸರ್ಕಾರವು ಮಹಿಳೆಯರ ,ಬಡವರ ಶೋಷಣೆಯೇ ದೇಶದ ಅಭಿವೃದ್ದಿ ಎಂದು ಪರಿಗಣಿಸಿದೆ. ನಿರಂತರವಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಜನವಿರೋಧಿ ಆಡಳಿತ ನಡೆಸುತ್ತಿರುವ ಮೋದಿ ಸರ್ಕಾರಕ್ಕೆ ಅಧಿಕಾರದಲ್ಲಿರಲು ಯಾವ ಅರ್ಹತೆಯೂ ಇಲ್ಲ
ಎಂದು ಆಕ್ರೋಶ ವ್ಯಕ್ತಪಡಿಸಿದರು.
ಝೀನತ್ ಗೂಡಿನಬಳಿ ಮಾತನಾಡಿ , ವಿಶ್ವ ಗುರುವಿನ ಟೈಟಲ್ ನಲ್ಲಿ ಮೋದಿ ಸರ್ಕಾರವು ಕಾರ್ಪೋರೇಟ್ ಕುಲಗಳನ್ನು ಅಭಿವೃದ್ದಿಗೊಳಿಸಿ ಬಡವರನ್ನು ಮತ್ತಷ್ಟು ಬಡತನಕ್ಕೆ ತಳ್ಳುವ ವಂಚನೆಯ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು .
ಮಹಿಳೆಯರು ಬ್ಯಾನರ್ ಹಾಗೂ ಫಲಕಗಳನ್ನು ಪ್ರದರ್ಶಿಸಿ, ಗ್ಯಾಸ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಬದುಕಿನ ಮೇಲೆ ಭಾರೀ ಹೊರೆ ಬೀಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಬೆಲೆ ನಿಯಂತ್ರಣ ಮತ್ತು ಸುಗಮ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…