ಗ್ಯಾಸ್ ಸಿಲಿಂಡರ್ಗಳ ನಿರಂತರ ಬೆಲೆ ಏರಿಕೆ ಹಾಗೂ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ, ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಬಿಸಿರೋಡ್ ಫ್ಲೈಓವರ್ ಕೆಳಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.
ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿ, ಗೃಹಬಳಕೆಯ ಗ್ಯಾಸ್ ದರವನ್ನು ಕಡಿಮೆಗೊಳಿಸುವಂತೆ ಹಾಗೂ ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ಸಿಲಿಂಡರ್ ವಿತರಣೆ ಮಾಡುವಂತೆ ಆಗ್ರಹಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಂ ಮಾತನಾಡಿ ,
ಕೇಂದ್ರ ಬಿಜೆಪಿ ಸರ್ಕಾರವು ಮಹಿಳೆಯರ ,ಬಡವರ ಶೋಷಣೆಯೇ ದೇಶದ ಅಭಿವೃದ್ದಿ ಎಂದು ಪರಿಗಣಿಸಿದೆ. ನಿರಂತರವಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಜನವಿರೋಧಿ ಆಡಳಿತ ನಡೆಸುತ್ತಿರುವ ಮೋದಿ ಸರ್ಕಾರಕ್ಕೆ ಅಧಿಕಾರದಲ್ಲಿರಲು ಯಾವ ಅರ್ಹತೆಯೂ ಇಲ್ಲ
ಎಂದು ಆಕ್ರೋಶ ವ್ಯಕ್ತಪಡಿಸಿದರು.
ಝೀನತ್ ಗೂಡಿನಬಳಿ ಮಾತನಾಡಿ , ವಿಶ್ವ ಗುರುವಿನ ಟೈಟಲ್ ನಲ್ಲಿ ಮೋದಿ ಸರ್ಕಾರವು ಕಾರ್ಪೋರೇಟ್ ಕುಲಗಳನ್ನು ಅಭಿವೃದ್ದಿಗೊಳಿಸಿ ಬಡವರನ್ನು ಮತ್ತಷ್ಟು ಬಡತನಕ್ಕೆ ತಳ್ಳುವ ವಂಚನೆಯ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು .
ಮಹಿಳೆಯರು ಬ್ಯಾನರ್ ಹಾಗೂ ಫಲಕಗಳನ್ನು ಪ್ರದರ್ಶಿಸಿ, ಗ್ಯಾಸ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಬದುಕಿನ ಮೇಲೆ ಭಾರೀ ಹೊರೆ ಬೀಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಬೆಲೆ ನಿಯಂತ್ರಣ ಮತ್ತು ಸುಗಮ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು…
ಕೇರಳದಲ್ಲಿ ಮತ್ತೊಮ್ಮೆ ನಿಫಾ ವೈರಸ್ ಆತಂಕ ಸೃಷ್ಟಿಯಾಗಿದ್ದು, ಕೋಯಿಕ್ಕೋಡ್ ಜಿಲ್ಲೆಯ 43 ವರ್ಷದ ವ್ಯಕ್ತಿಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದೆ.…
ಬಸ್ನಲ್ಲಿ ಕಳೆದುಕೊಂಡಿದ್ದ 8 ಪವನ್ ಚಿನ್ನಾಭರಣವನ್ನು ಸಂಬ0ಧಪಟ್ಟವರಿಗೆ ಬಸ್ ಕಂಡಕ್ಟರ್ ಮರಳಿಸಿದ ಮಾನವೀಯ ಘಟನೆ ಇತ್ತೀಚೆಗೆ ನಡೆದಿದೆ. ಬಿ.ಸಿ…
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…