ಕಾಮಗಾರಿಯ ವೇಳೆ ರಸ್ತೆಯಲ್ಲಿ ರಾಶಿ ಹಾಕಲಾಗಿದ್ದ ಕಾಂಕ್ರೀಟ್ ತುಂಡುಗಳನ್ನು ತೆರವು ಗೊಳಿಸದೆ ಇರುವುದೇ ಕಾರು ಅಪಘಾತಕ್ಕೆ ಕಾರಣವಾಗಿ ಜೀವಹೋಗಿದೆ ಎಂದು ಆರೋಪ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಅಡಿಸನಲ್ ಎಸ್.ಪಿ.ಅನಿಲ್ ಎಸ್.ಭೂಮರೆಡ್ಡಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಗಡಿಯಾರದಲ್ಲಿ ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿ ಚಾಲಕ ಮೃತಪಟ್ಟಿದ್ದ. ಘಟನೆ ನಡೆದ ಬಳಿಕ ಅಪಘಾತದಲ್ಲಿ ಚಾಲಕ ಸಾವನ್ನಪ್ಪಲು ರಸ್ತೆಯಲ್ಲಿ ಹಾಕಲಾದ ಸಿಮೆಂಟ್ ಬ್ಲಾಕ್ಗಳು ಕಾರಣವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪಗಳು ವ್ಯಕ್ತವಾಗಿದ್ದವು.

ಅದಾಗಿ ಎರಡನೇ ದಿನಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ರಸ್ತೆ ದಾಟಿ ಹೋಗುತ್ತಿದ್ದ ಪಾದಾಚಾರಿ ಸೈಯದ್ ರಿಯಾಜ್ ಎಂಬವರಿಗೆ ಕಾರೊಂದು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕೂಡ ನಡೆದಿದೆ. ಎರಡು ಘಟನಾ ಸ್ಥಳಗಳಿಗೆ ಅಡಿಸನಲ್ ಎಸ್. ಪಿ.ಅನಿಲ್ ಎಸ್.ಭೂಮರೆಡ್ಡಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಂಟ್ವಾಳ ಟ್ರಾಫಿಕ್ ಎಸ್.ಐ.ಆದರ್ಶ್ ಮತ್ತು ಸಿಬ್ಬಂದಿಗಳು ಹಾಜರಿದ್ದರು.



