ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ರಸ್ತೆಯಲ್ಲಿ ರಾಶಿ ಹಾಕಲಾಗಿದ್ದ ಕಾಂಕ್ರೀಟ್ ತುಂಡುಗಳಿಂದ ರಸ್ತೆ ಅಪಘಾತ…!

ಕಾಮಗಾರಿಯ ವೇಳೆ ರಸ್ತೆಯಲ್ಲಿ ರಾಶಿ ಹಾಕಲಾಗಿದ್ದ ಕಾಂಕ್ರೀಟ್ ತುಂಡುಗಳನ್ನು ತೆರವು ಗೊಳಿಸದೆ ಇರುವುದೇ ಕಾರು ಅಪಘಾತಕ್ಕೆ ಕಾರಣವಾಗಿ ಜೀವಹೋಗಿದೆ ಎಂದು ಆರೋಪ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಅಡಿಸನಲ್ ಎಸ್.ಪಿ.ಅನಿಲ್ ಎಸ್.ಭೂಮರೆಡ್ಡಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಗಡಿಯಾರದಲ್ಲಿ ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿ ಚಾಲಕ ಮೃತಪಟ್ಟಿದ್ದ. ಘಟನೆ ನಡೆದ ಬಳಿಕ ಅಪಘಾತದಲ್ಲಿ ಚಾಲಕ ಸಾವನ್ನಪ್ಪಲು ರಸ್ತೆಯಲ್ಲಿ ಹಾಕಲಾದ ಸಿಮೆಂಟ್ ಬ್ಲಾಕ್‌ಗಳು ಕಾರಣವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪಗಳು ವ್ಯಕ್ತವಾಗಿದ್ದವು.

ಅದಾಗಿ ಎರಡನೇ ದಿನಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ರಸ್ತೆ ದಾಟಿ ಹೋಗುತ್ತಿದ್ದ ಪಾದಾಚಾರಿ ಸೈಯದ್ ರಿಯಾಜ್ ಎಂಬವರಿಗೆ ಕಾರೊಂದು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕೂಡ ನಡೆದಿದೆ. ಎರಡು ಘಟನಾ ಸ್ಥಳಗಳಿಗೆ ಅಡಿಸನಲ್ ಎಸ್. ಪಿ.ಅನಿಲ್ ಎಸ್.ಭೂಮರೆಡ್ಡಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಂಟ್ವಾಳ ಟ್ರಾಫಿಕ್ ಎಸ್.ಐ.ಆದರ್ಶ್ ಮತ್ತು ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!