ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಬಿಗಿ ಭದ್ರತೆಯ ನಡುವೆ ಮಂಗಳೂರಿನಿಂದ ರಸ್ತೆ ಮೂಲಕ ಕೊಲ್ಲೂರಿಗೆ ಆಗಮಿಸಿದ ವಿಜಯ್ ಅವರನ್ನು ದೇವಾಲಯದ ಆವರಣದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಿ ಬರ ಮಾಡಿಕೊಳ್ಳಲಾಯಿತು. ದೇವಾಲಯದ ಹೊರ ಅವರಣದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳು ವಿಜಯ್ ಅವರನ್ನು ನೋಡುತ್ತಲೇ ಜಯಕಾರ ಹಾಕಿದ್ದಾರೆ. ಸಂಪ್ರದಾಯದಂತೆ ಶಾಲು ಹೊದ್ದುಕೊಂಡು ಒಳಪ್ರವೇಶಿಸಿದ ತಮಿಳು ನಾಡು ಮುಖ್ಯಮಂತ್ರಿ ವಿಜಯ್ ದೇವರಿಗೆ ತುಪ್ಪದ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾರೆ. ಇನ್ನು ಈ ಸಂದರ್ಭ ದೇವಾಲಯದ ಆಡಳಿತ ಧರ್ಮದರ್ಶಿ ಬಾಬು ಹೆಗ್ಡೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಸಹಾಯಕ ಕಮಿಶನರ್, ದೇವಾಲಯ ಆಡಳಿತ ಮಂಡಳಿ ಸದಸ್ಯರು, ಮಾಜಿ ಶಾಸಕ ಗೋಪಾಲ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.



