ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ.
ಹೆದ್ದಾರಿ ಕಾಮಗಾರಿಯ ವೇಳೆ ಅಗೆದಿರುವ ರಸ್ತೆಗೆ ಕಾಂಕ್ರೀಟ್ ಹಾಕದೆ ಇರುವ ಕಾರಣದಿಂದ ಮಳೆಗಾಲ ಆರಂಭದಲ್ಲೇ ಬೃಹತ್ ಗಾತ್ರದ ಹೊಂಡಗುಂಡಿಗಳಲ್ಲಿ ಕೆಸರು ನೀರು ತುಂಬಿದೆ. ಹೊಂಡದಲ್ಲಿ ಬಿದ್ದ ವಾಹನಗಳು ಮತ್ತೆ ಎದ್ದೇಳಲು ಸಾಧ್ಯವಾಗದೆ ಹರಸಾಹಸ ಪಡುವ ದೃಶ್ಯಗಳು ಕಂಡುಬಂದಿವೆ.
ದ್ವಿಚಕ್ರವಾಹನ ಸವಾರರಂತೂ ರಾತ್ರಿ ವೇಳೆ ಗುಂಡಿಗೆ ಬಿದ್ದು ಪ್ರಾಣಕ್ಕೆ ಅಪಾಯವಾಗುವ ಸಂಭವಗಳು ಜಾಸ್ತಿ ಇವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡು ಕೆಲಸ ನಿರ್ವಹಿಸುವ ಕೆಎನ್ಆರ್ಸಿ ಕಂಪೆನಿಯ ಪ್ರಮುಖರಲ್ಲಿ ಅನೇಕ ಬಾರಿ ಹೇಳಿದರು ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪ ಮಾಡಿದ್ದಾರೆ. ಮಳೆಗಾಲವಾದ್ದರಿಂದ ಗುಂಡಿಗಳಿಗೆ ಬಿದ್ದು ಜೀವಕ್ಕೆ ಅಪಾಯವಾಗುವ ಮುನ್ನ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಲು ಸ್ಥಳೀಯರು ಮನವಿ ಮಾಡಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು…