ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ.
ಹೆದ್ದಾರಿ ಕಾಮಗಾರಿಯ ವೇಳೆ ಅಗೆದಿರುವ ರಸ್ತೆಗೆ ಕಾಂಕ್ರೀಟ್ ಹಾಕದೆ ಇರುವ ಕಾರಣದಿಂದ ಮಳೆಗಾಲ ಆರಂಭದಲ್ಲೇ ಬೃಹತ್ ಗಾತ್ರದ ಹೊಂಡಗುಂಡಿಗಳಲ್ಲಿ ಕೆಸರು ನೀರು ತುಂಬಿದೆ. ಹೊಂಡದಲ್ಲಿ ಬಿದ್ದ ವಾಹನಗಳು ಮತ್ತೆ ಎದ್ದೇಳಲು ಸಾಧ್ಯವಾಗದೆ ಹರಸಾಹಸ ಪಡುವ ದೃಶ್ಯಗಳು ಕಂಡುಬಂದಿವೆ.
ದ್ವಿಚಕ್ರವಾಹನ ಸವಾರರಂತೂ ರಾತ್ರಿ ವೇಳೆ ಗುಂಡಿಗೆ ಬಿದ್ದು ಪ್ರಾಣಕ್ಕೆ ಅಪಾಯವಾಗುವ ಸಂಭವಗಳು ಜಾಸ್ತಿ ಇವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡು ಕೆಲಸ ನಿರ್ವಹಿಸುವ ಕೆಎನ್ಆರ್ಸಿ ಕಂಪೆನಿಯ ಪ್ರಮುಖರಲ್ಲಿ ಅನೇಕ ಬಾರಿ ಹೇಳಿದರು ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪ ಮಾಡಿದ್ದಾರೆ. ಮಳೆಗಾಲವಾದ್ದರಿಂದ ಗುಂಡಿಗಳಿಗೆ ಬಿದ್ದು ಜೀವಕ್ಕೆ ಅಪಾಯವಾಗುವ ಮುನ್ನ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಲು ಸ್ಥಳೀಯರು ಮನವಿ ಮಾಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…