ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಕಾಣೆಯಾದವರನ್ನು ಕೊಟ್ಟಾಯಂ ಜಿಲ್ಲೆಯ ಚಂಗನಾಶೇರಿ ನಿವಾಸಿಗಳಾದ ಅಂಗಿತ್ ಹಾಗೂ ಅಪ್ಪು ಟಿ. ಎಬ್ರಹಾಂ ಎಂದು ಗುರುತಿಸಲಾಗಿದೆ. ನಾಲ್ವರು ವಿದ್ಯಾರ್ಥಿಗಳ ತಂಡ ಪಳ್ಳಿಕರೆ ಬೀಚ್ಗೆ ಭೇಟಿ ನೀಡಿದ್ದು, ಸಂಜೆ ವೇಳೆ ಸಮುದ್ರದಲ್ಲಿ ಈಜಲು ಇಳಿದಿದ್ದರು. ಈ ಸಂದರ್ಭದಲ್ಲಿ ಬಲವಾದ ಅಲೆಗಳ ಹೊಡೆತಕ್ಕೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದಾರೆ. ಉಳಿದ ಇಬ್ಬರು ವಿದ್ಯಾರ್ಥಿಗಳು ಸ್ಥಳೀಯರ ನೆರವಿನಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂಜೆ ಸುಮಾರು 6.30ರ ವೇಳೆಗೆ ಘಟನೆ ಸಂಭವಿಸಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಬೇಕಲ ಪೊಲೀಸರು, ಸ್ಥಳೀಯ ಮೀನುಗಾರರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಕಾಣೆಯಾದ ವಿದ್ಯಾರ್ಥಿಗಳ ಪತ್ತೆಗಾಗಿ ರಾತ್ರಿ ಹೊತ್ತಿನಲ್ಲಿಯೂ ಕಾರ್ಯಾಚರಣೆ ಮುಂದುವರಿದಿದ್ದು, ಸೋಮವಾರವೂ ವ್ಯಾಪಕ ಶೋಧ ನಡೆಸಲಾಗುತ್ತಿದೆ. ಈ ಘಟನೆ ಪ್ರವಾಸಿಗರ ಸುರಕ್ಷತೆ ಹಾಗೂ ಅಪಾಯಕಾರಿ ಕಡಲತೀರ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಅಗತ್ಯತೆಯನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ.
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು…