ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ.

ಬಿಸಿರೋಡಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಇರುವ ನಾಗರಾಜ್ ಎಂಬವರಿಗೆ ಸೇರಿದ ನಾಗ ಕ್ಯಾಂಟೀನ್‌ನ ಹಿಂಬದಿಯಲ್ಲಿ ದೋಸೆ ಮಾಡಲು ಇರಿಸಲಾಗಿದ್ದ ಅಡುಗೆ ಅನಿಲದಲ್ಲಿ ಸೋರಿಕೆ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ. ದೋಸೆ ಮಾಡುತ್ತಿದ್ದ ಕ್ಯಾಂಟೀನ್‌ನ ಕೆಲಸಗಾರ ವಿಶ್ವನಾಥ ಎಂಬವರಿಗೆ ಅನಿಲ ಸೋರಿಕೆಯಿಂದ ತಗುಲಿಗೊಂಡ ಬೆಂಕಿಗೆ ಸ್ವಲ್ಪ ಮಟ್ಟಿಗೆ ಗಾಯವಾಗಿದೆ. ಇದರ ಜೊತೆಗೆ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ ಮಾಲಕನ ಸಹೋದರ ಹರೀಶ್ ಎಂಬವರಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸ್ವಲ್ಪದರದಲ್ಲಿ ಅತ್ಯಂತ ದೊಡ್ಡ ಅನಾಹುತ ತಪ್ಪಿದೆ. ಬೆಳಿಗ್ಗೆ ಹೊತ್ತಿಗೆ ಕ್ಯಾಂಟೀನ್‌ಗೆ ನೂರಾರು ಜನ ಗ್ರಾಹಕರು ಬರುವ ಸಮಯ ಮತ್ತು ಹತ್ತಿರದಲ್ಲಿ ರಕ್ತೇಶ್ವರಿ ದೇವಸ್ಥಾನ, ಅನೇಕ ಸರಕಾರಿ ಕಚೇರಿಗಳು ಹೀಗೆ ಕೋಟ್ಯಾಂತರ ಬೆಲೆ ಬಾಳುವ ಸುತ್ತಲಿನ ಜಾಗವಾಗಿದ್ದು, ಸದ್ಯ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಗ್ಯಾಸ್ ಸೋರಿಕೆಯಿಂದ ಬೆಂಕಿಯನ್ನು ಕೂಡಲೇ ಸ್ಥಳೀಯರು ನಂದಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಅಪಾಯ ತಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!