ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ.

ಬಿಸಿರೋಡಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಇರುವ ನಾಗರಾಜ್ ಎಂಬವರಿಗೆ ಸೇರಿದ ನಾಗ ಕ್ಯಾಂಟೀನ್‌ನ ಹಿಂಬದಿಯಲ್ಲಿ ದೋಸೆ ಮಾಡಲು ಇರಿಸಲಾಗಿದ್ದ ಅಡುಗೆ ಅನಿಲದಲ್ಲಿ ಸೋರಿಕೆ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ. ದೋಸೆ ಮಾಡುತ್ತಿದ್ದ ಕ್ಯಾಂಟೀನ್‌ನ ಕೆಲಸಗಾರ ವಿಶ್ವನಾಥ ಎಂಬವರಿಗೆ ಅನಿಲ ಸೋರಿಕೆಯಿಂದ ತಗುಲಿಗೊಂಡ ಬೆಂಕಿಗೆ ಸ್ವಲ್ಪ ಮಟ್ಟಿಗೆ ಗಾಯವಾಗಿದೆ. ಇದರ ಜೊತೆಗೆ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ ಮಾಲಕನ ಸಹೋದರ ಹರೀಶ್ ಎಂಬವರಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸ್ವಲ್ಪದರದಲ್ಲಿ ಅತ್ಯಂತ ದೊಡ್ಡ ಅನಾಹುತ ತಪ್ಪಿದೆ. ಬೆಳಿಗ್ಗೆ ಹೊತ್ತಿಗೆ ಕ್ಯಾಂಟೀನ್‌ಗೆ ನೂರಾರು ಜನ ಗ್ರಾಹಕರು ಬರುವ ಸಮಯ ಮತ್ತು ಹತ್ತಿರದಲ್ಲಿ ರಕ್ತೇಶ್ವರಿ ದೇವಸ್ಥಾನ, ಅನೇಕ ಸರಕಾರಿ ಕಚೇರಿಗಳು ಹೀಗೆ ಕೋಟ್ಯಾಂತರ ಬೆಲೆ ಬಾಳುವ ಸುತ್ತಲಿನ ಜಾಗವಾಗಿದ್ದು, ಸದ್ಯ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಗ್ಯಾಸ್ ಸೋರಿಕೆಯಿಂದ ಬೆಂಕಿಯನ್ನು ಕೂಡಲೇ ಸ್ಥಳೀಯರು ನಂದಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಅಪಾಯ ತಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

error: Content is protected !!