ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ.
ಬಿಸಿರೋಡಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಇರುವ ನಾಗರಾಜ್ ಎಂಬವರಿಗೆ ಸೇರಿದ ನಾಗ ಕ್ಯಾಂಟೀನ್ನ ಹಿಂಬದಿಯಲ್ಲಿ ದೋಸೆ ಮಾಡಲು ಇರಿಸಲಾಗಿದ್ದ ಅಡುಗೆ ಅನಿಲದಲ್ಲಿ ಸೋರಿಕೆ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ. ದೋಸೆ ಮಾಡುತ್ತಿದ್ದ ಕ್ಯಾಂಟೀನ್ನ ಕೆಲಸಗಾರ ವಿಶ್ವನಾಥ ಎಂಬವರಿಗೆ ಅನಿಲ ಸೋರಿಕೆಯಿಂದ ತಗುಲಿಗೊಂಡ ಬೆಂಕಿಗೆ ಸ್ವಲ್ಪ ಮಟ್ಟಿಗೆ ಗಾಯವಾಗಿದೆ. ಇದರ ಜೊತೆಗೆ ಕ್ಯಾಂಟೀನ್ನಲ್ಲಿ ಕೆಲಸ ಮಾಡುತ್ತಿದ್ದ ಮಾಲಕನ ಸಹೋದರ ಹರೀಶ್ ಎಂಬವರಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸ್ವಲ್ಪದರದಲ್ಲಿ ಅತ್ಯಂತ ದೊಡ್ಡ ಅನಾಹುತ ತಪ್ಪಿದೆ. ಬೆಳಿಗ್ಗೆ ಹೊತ್ತಿಗೆ ಕ್ಯಾಂಟೀನ್ಗೆ ನೂರಾರು ಜನ ಗ್ರಾಹಕರು ಬರುವ ಸಮಯ ಮತ್ತು ಹತ್ತಿರದಲ್ಲಿ ರಕ್ತೇಶ್ವರಿ ದೇವಸ್ಥಾನ, ಅನೇಕ ಸರಕಾರಿ ಕಚೇರಿಗಳು ಹೀಗೆ ಕೋಟ್ಯಾಂತರ ಬೆಲೆ ಬಾಳುವ ಸುತ್ತಲಿನ ಜಾಗವಾಗಿದ್ದು, ಸದ್ಯ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಗ್ಯಾಸ್ ಸೋರಿಕೆಯಿಂದ ಬೆಂಕಿಯನ್ನು ಕೂಡಲೇ ಸ್ಥಳೀಯರು ನಂದಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಅಪಾಯ ತಪ್ಪಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…